Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ದೂರದರ್ಶನ’ದೊಳಗೆ ಪೃಥ್ವಿ ಅಂಬರ್ ಜೊತೆ ಕಂಡಳು ನಾಯಕಿ ಆಯನಾ!
ದಿಯಾ
ಸಿನಿಮಾ
ಮೂಲಕ
ಕನ್ನಡ
ಚಿತ್ರರಂಗಕ್ಕೆ
ಹೊಸ
ಮುಖದ
ಪರಿಚಯವಾಯಿತು.
ಅವರೇ
ಪೃಥ್ವಿ
ಅಂಬರ್.
ಈಗತಾನೇ
ಪೃಥ್ವಿ
ಅಂಬರ್
ಅಭಿನಯದ
ಮೊದಲ
ಮಲ್ಟಿಸ್ಟಾರರ್
ಸಿನಿಮಾ
'ಬೈರಾಗಿ'
ರಿಲೀಸ್
ಆಗಿದೆ.
ಈಗ
'ದೂರದರ್ಶನ'
ಹೊತ್ತು
ಬರಲು
ಸಜ್ಜಾಗಿದ್ದಾರೆ.
ಇದೊಂದು
ವಿಭಿನ್ನ
ಕಥಾಹಂದರ
ಹೊಂದಿರುವ
ಸಿನಿಮಾ
ಆಗಿದ್ದು
ಟೈಟಲ್ನಿಂದಲೇ
ಗಮನ
ಸೆಳೆಯುತ್ತಿದೆ.
'ದೂರದರ್ಶನ'
ಟೈಟಲ್
ಟೀಸರ್
ಇತ್ತೀಚೆಗೆ
ರಿಲೀಸ್
ಆಗಿದ್ದು,
ಸಾಕಷ್ಟು
ಸಿನಿಪ್ರಿಯರ
ಗಮನ
ಸೆಳೆದಿದೆ.
ಇಲ್ಲಿವರೆಗೂ 'ದೂರದರ್ಶನ'ದಲ್ಲಿರು ನಾಯಕಿ ಯಾರು ಎಂಬುದನ್ನು ಪರಿಚಯ ಮಾಡಿರಲಿಲ್ಲ. ಈಗ ಚಿತ್ರತಂಡ ನಾಯಕಿಯನ್ನು ಸಿನಿಪ್ರಿಯರಿಗೆ ಪರಿಚಯಿಸುತ್ತಿದೆ. ಈ ಹಿಂದೆ 'ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ' ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟಿದ್ದ ಆಯನಾ ಪೃಥ್ವಿ ಅಂಬರ್ಗೆ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ದೂರದರ್ಶನಕ್ಕೆ ಆಯನಾ ಆಯ್ಕೆ ಆಗಿದ್ದೇಗೆ?
'ದೂರದರ್ಶನ' ಸಿನಿಮಾ ಅನೌನ್ಸ್ ಆದಾಗ ನಾಯಕಿ ಪಾತ್ರಕ್ಕೆ ಹುಡುಕಾಟ ನಡೆದಿತ್ತು. ಈ ವೇಳೆ ನಾಯಕಿ ಆಯ್ಕೆಗಾಗಿ ಆಡಿಷನ್ ಕರೆಯಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಸುಮಾರು 30 ರಿಂದ 40 ಮಂದಿ ಆಡಿಷನ್ನಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ ಆಯನಾ ಕೊನೆಯದಾಗಿ ಆಗಿ ಆಯ್ಕೆಯಾದರು.
ಈ ಸಿನಿಮಾದಲ್ಲಿ ಆಯನಾ, ಮೈತ್ರಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಿಕ್ಷಾ ಡ್ರೈವರ್ ಮಗಳಾಗಿ ಅಪ್ಪನ ಆಸೆಯಲ್ಲಿ ಬೆಳೆಯುವ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಾರೆ. ಈ ಹುಡುಗಿ ಪ್ರೀತಿಯಲ್ಲಿ ಬಿದ್ದಾಗ ಮುಂದೇನು ಆಗುತ್ತೆ ಎಂಬುದು ಆಯನಾ ಪಾತ್ರ.
ನೈಜ ಘಟನೆ ಆಧರಿಸಿದ ಸಿನಿಮಾ
ನೈಜ ಘಟನೆ ಹಾಗೂ ಕಾಲ್ಪನಿಕತೆ ಎರಡನ್ನೂ ಸೇರಿಸಿ 'ದೂರದರ್ಶನ' ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಸುಕೇಶ್ ಶೆಟ್ಟಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮಂಗಳೂರು ಪುತ್ತೂರು ಸೇರಿದಂತೆ ಹಲವೆಡೆ 38 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ರಾಜೇಶ್ ಭಟ್ ಎಂಬುವವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ನಂದೀಶ್ ಟಿಜಿ ಸಂಭಾಷಣೆ ಬರೆದಿದ್ದಾರೆ.
ಪೃಥ್ವಿ ಹಾಗೂ ಆಯನಾ ಜೊತೆ ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ ಕಾಣಿಸಿಕೊಂಡಿದ್ದು, ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರ ತಾರಾಗಣ ಸಿನಿಮಾದಲ್ಲಿದೆ. ಸಂಭಾಷಣೆ ಹಾಗೂ ಸಹಾಯಕ ನಿರ್ದೇಶಕರಾಗಿ ಸುಕೇಶ್ ಶೆಟ್ಟಿ ಕೆಲಸ ಮಾಡಿದ್ದಾರೆ. ಹಲವು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದು ಈಗ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಇದು ಅವರ ಮೊದಲ ಸಿನಿಮಾ ಕೂಡ ಹೌದು.