Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದದ ಸುಳಿಯಲ್ಲಿ 'ಅಯೋಗ್ಯ' ಸಿನಿಮಾ
ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅಭಿನಯದ 'ಅಯೋಗ್ಯ' ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದಲ್ಲಿ ಸಿಲುಕಿಕೊಂಡಿದೆ. ಈಗಾಗಲೇ ಚಿತ್ರೀಕರಣ ಕಂಪ್ಲೀಟ್ ಮಾಡಿ ಮುಂದಿನ ತಿಂಗಳು ತೆರೆಗೆ ಬರಬೇಕಿರುವ ಚಿತ್ರ ಇದಾಗಿದ್ದು ಆರಂಭದಿಂದಲೂ ಇಲ್ಲದ ಶೀರ್ಷಿಕೆ ಸಮಸ್ಯೆ ಈಗ ಎದುರಾಗಿದೆ.
'ಅಯೋಗ್ಯ' ಎನ್ನು ಶೀರ್ಷಿಕೆ ಅಡಿಯಲ್ಲಿ ಉಪ ಶೀರ್ಷಿಕೆಯಾಗಿ ಗ್ರಾಮ ಪಂಚಾಯಿತಿ ಸದಸ್ಯ ಎಂದು ಬಳಸಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯ ಎನ್ನು ಉಪ ಶೀರ್ಷಿಕೆಯನ್ನು ಕೈ ಬಿಡಬೇಕು ಎಂದು ಮೈಸೂರಿನ ಕನ್ನಡ ಕ್ರಾಂತಿ ದಳ ಸಂಘಟನೆ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದೆ. ಅದಷ್ಟೇ ಅಲ್ಲದೆ ಶೀರ್ಷಿಕೆ ನೀಡುವ ವಿಚಾರದಲ್ಲಿ ವಾಣಿಜ್ಯ ಮಂಡಳಿ ಸರಿಯಾದ ಕೆಲಸ ಮಾಡಿಲ್ಲ ಎಂದು ಆರೋಪವನ್ನು ಮಾಡಿದೆ.
'ಅಯೋಗ್ಯ' ಚಿತ್ರದ ವೇಳೆ ನಟ ಸತೀಶ್ ನೀನಾಸಂ ಕಾರು ಅಪಘಾತ !
ಇದೇ ವಿಚಾರಕ್ಕೆ ಪ್ರತ್ಯುತ್ತರ ನೀಡಿರುವ ವಾಣಿಜ್ಯ ಮಂಡಳಿ 'ಅಯೋಗ್ಯ' ಎನ್ನುವ ಶೀರ್ಷಿಕೆಯಷ್ಟೇ ನೋಂದಣಿ ಆಗಿರುವುದು 'ಅಯೋಗ್ಯ' ಗ್ರಾಮ ಪಂಚಾಯಿತಿ ಸದಸ್ಯ ಎನ್ನುವುದು ಅಲ್ಲ ಎನ್ನುವುದನ್ನು ತಿಳಿಸಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ನೀನಾಸಂ ಸತೀಶ್ ಸಿನಿಮಾ ನೋಡದೇ ಶೀರ್ಷಿಕೆ ತಪ್ಪಾಗಿದೆ ಎಂದು ತೊಂದರೆ ಕೊಡುವುದು ಸರಿಯಲ್ಲ ಎಂದಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಮಹೇಶ್ ಕುಮಾರ್ ಸಿನಿಮಾ ಕಥೆಗೆ ತಕ್ಕಂತೆ ಶೀರ್ಷಿಕೆ ಇದೆ. ಸಿನಿಮಾ ಪೂರ್ತಿ ಮಂಡ್ಯ ಬಳಿಯ ಹಳ್ಳಿಯಲ್ಲಿ ಚಿತ್ರೀಕರಿಸಿಲಾಗಿದೆ. ಅದಕ್ಕೂ ಮುನ್ನ ಅಲ್ಲಿಯ ಜನರ ಹಾಗೂ ಹಿರಿಯ ಮುಖಂಡರಿಗೆ ಕಥೆ ಹೇಳಿ ಅನುಮತಿ ಪಡೆದ ನಂತರ ಚಿತ್ರೀಕರಣ ಮಾಡಲಾಗಿದೆ. ಆರಂಭದಿಂದ ಇಲ್ಲದ ಸಮಸ್ಯೆ ಈಗ ಏಕೆ ಬಂತು ಎನ್ನುವುದು ಚಿತ್ರತಂಡದ ಪ್ರಶ್ನೆ ಆಗಿದೆ.