Don't Miss!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದದ ಸುಳಿಯಲ್ಲಿ 'ಅಯೋಗ್ಯ' ಸಿನಿಮಾ
ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅಭಿನಯದ 'ಅಯೋಗ್ಯ' ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದಲ್ಲಿ ಸಿಲುಕಿಕೊಂಡಿದೆ. ಈಗಾಗಲೇ ಚಿತ್ರೀಕರಣ ಕಂಪ್ಲೀಟ್ ಮಾಡಿ ಮುಂದಿನ ತಿಂಗಳು ತೆರೆಗೆ ಬರಬೇಕಿರುವ ಚಿತ್ರ ಇದಾಗಿದ್ದು ಆರಂಭದಿಂದಲೂ ಇಲ್ಲದ ಶೀರ್ಷಿಕೆ ಸಮಸ್ಯೆ ಈಗ ಎದುರಾಗಿದೆ.
'ಅಯೋಗ್ಯ' ಎನ್ನು ಶೀರ್ಷಿಕೆ ಅಡಿಯಲ್ಲಿ ಉಪ ಶೀರ್ಷಿಕೆಯಾಗಿ ಗ್ರಾಮ ಪಂಚಾಯಿತಿ ಸದಸ್ಯ ಎಂದು ಬಳಸಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯ ಎನ್ನು ಉಪ ಶೀರ್ಷಿಕೆಯನ್ನು ಕೈ ಬಿಡಬೇಕು ಎಂದು ಮೈಸೂರಿನ ಕನ್ನಡ ಕ್ರಾಂತಿ ದಳ ಸಂಘಟನೆ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದೆ. ಅದಷ್ಟೇ ಅಲ್ಲದೆ ಶೀರ್ಷಿಕೆ ನೀಡುವ ವಿಚಾರದಲ್ಲಿ ವಾಣಿಜ್ಯ ಮಂಡಳಿ ಸರಿಯಾದ ಕೆಲಸ ಮಾಡಿಲ್ಲ ಎಂದು ಆರೋಪವನ್ನು ಮಾಡಿದೆ.
'ಅಯೋಗ್ಯ' ಚಿತ್ರದ ವೇಳೆ ನಟ ಸತೀಶ್ ನೀನಾಸಂ ಕಾರು ಅಪಘಾತ !
ಇದೇ ವಿಚಾರಕ್ಕೆ ಪ್ರತ್ಯುತ್ತರ ನೀಡಿರುವ ವಾಣಿಜ್ಯ ಮಂಡಳಿ 'ಅಯೋಗ್ಯ' ಎನ್ನುವ ಶೀರ್ಷಿಕೆಯಷ್ಟೇ ನೋಂದಣಿ ಆಗಿರುವುದು 'ಅಯೋಗ್ಯ' ಗ್ರಾಮ ಪಂಚಾಯಿತಿ ಸದಸ್ಯ ಎನ್ನುವುದು ಅಲ್ಲ ಎನ್ನುವುದನ್ನು ತಿಳಿಸಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ನೀನಾಸಂ ಸತೀಶ್ ಸಿನಿಮಾ ನೋಡದೇ ಶೀರ್ಷಿಕೆ ತಪ್ಪಾಗಿದೆ ಎಂದು ತೊಂದರೆ ಕೊಡುವುದು ಸರಿಯಲ್ಲ ಎಂದಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಮಹೇಶ್ ಕುಮಾರ್ ಸಿನಿಮಾ ಕಥೆಗೆ ತಕ್ಕಂತೆ ಶೀರ್ಷಿಕೆ ಇದೆ. ಸಿನಿಮಾ ಪೂರ್ತಿ ಮಂಡ್ಯ ಬಳಿಯ ಹಳ್ಳಿಯಲ್ಲಿ ಚಿತ್ರೀಕರಿಸಿಲಾಗಿದೆ. ಅದಕ್ಕೂ ಮುನ್ನ ಅಲ್ಲಿಯ ಜನರ ಹಾಗೂ ಹಿರಿಯ ಮುಖಂಡರಿಗೆ ಕಥೆ ಹೇಳಿ ಅನುಮತಿ ಪಡೆದ ನಂತರ ಚಿತ್ರೀಕರಣ ಮಾಡಲಾಗಿದೆ. ಆರಂಭದಿಂದ ಇಲ್ಲದ ಸಮಸ್ಯೆ ಈಗ ಏಕೆ ಬಂತು ಎನ್ನುವುದು ಚಿತ್ರತಂಡದ ಪ್ರಶ್ನೆ ಆಗಿದೆ.