Don't Miss!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- News Rameshwar Cafe: ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣ: ದಾಳಿಗೆ ಸಹಾಯ ಮಾಡಿದ ವ್ಯಕ್ತಿ ಬಂಧನ- ತೀರ್ಥಹಳ್ಳಿ ಉಗ್ರನೊಂದಿಗೆ ಸಂಪರ್
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾರಿ ಬಿಡಿ 'ಅಯೋಗ್ಯ' ಸತೀಶ ಬರ್ತಾವ್ನೆ
ನಿನಾಸಂ ಸತೀಶ್ ಹಾಗೂ ರಚಿತಾ ರಾಮ್ ಅಭಿನಯದ ಅಯೋಗ್ಯ ಸಿನಿಮಾದ ಮಾತಿನ ಭಾಗದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಮಂಡ್ಯದ ಸುತ್ತಾ ಮುತ್ತ ಹಳ್ಳಿಗಳಲ್ಲಿ ಅಯೋಗ್ಯ ಸಿನಿಮಾದ ಚಿತ್ರೀಕರಣ ನಡೆದಿದ್ದು ಮಹೇಶ್ ಕುಮಾರ್ ಇದೇ ಮೊದಲ ಬಾರಿಗೆ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ.
ಇಷ್ಟು ದಿನಗಳ ಕಾಲ ಗ್ಲಾಮರ್ ಲುಕ್ ನಲ್ಲಿ ಕನ್ನಡ ಸಿನಿ ರಸಿಕರ ಮನಸ್ಸು ಗೆದ್ದಿದ್ದ ಡಿಂಪಲ್ ಕ್ವೀನ್ ರಚಿತಾ ರಾಮ್ ಇದೇ ಮೊದಲ ಬಾರಿಗೆ ಪಕ್ಕಾ ಹಳ್ಳಿ ಹುಡುಗಿಯ ಪಾತ್ರದಲ್ಲಿ ಅಭಿನಯಿಸುವ ಮೂಲಕ ಗಂಡು ಮಕ್ಕಳ ನಿದ್ದೆ ಕದಿಯಲಿದ್ದಾರೆ. ಅಯೋಗ್ಯ ಚಿತ್ರದಲ್ಲಿ ಅದ್ದೂರಿ ತಾರಬಳಗವಿದ್ದು ರವಿಶಂಕರ್ ಖಳನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಶರತ್ ಚಕ್ರವರ್ತಿ ಸಂಭಾಷಣೆ ಬರೆದಿದ್ದಾರೆ.
'ಅಯೋಗ್ಯ'ನ ಜೊತೆ ಸೇರಿ ಹಳ್ಳಿ ಹುಡುಗಿ ಆದ ರಚಿತಾ ರಾಮ್
ಸಿನಿಮಾಗಾಗಿ ನಿನಾಸಂ ಸತೀಶ್ ಸಾಕಷ್ಟು ತಯಾರಿಯನ್ನು ಮಾಡಿಕೊಂಡಿದ್ದು ಕೆಲ ಸಮಯ ಜಿಮ್ ನಲ್ಲಿ ವರ್ಕ್ ಮಾಡಿ ಬೆವರಿಳಿಸಿದ್ದಾರೆ. ಫೋಟೋ ಶೂಟ್ ನಿಂದಲೇ ಬಾರಿ ಸುದ್ದಿ ಮಾಡಿದ್ದ ಅಯೋಗ್ಯ ಸಿನಿಮಾತಂಡ ಯುಗಾದಿ ಹಬ್ಬಕ್ಕೆ ಪ್ರೇಕ್ಷಕರಿಗೆ ಸಿಹಿ ಸುದ್ದಿಯನ್ನ ಹಂಚಲು ರೆಡಿ ಮಾಡಿಕೊಂಡಿದೆ.
ಯುಗಾದಿ ಹಬ್ಬದ ವಿಶೇಷವಾಗಿ ಹೊಸ ಪೋಸ್ಟರ್ ಬಿಡುಗಡೆ ಮಾಡಿರುವ ನಿರ್ದೇಶಕ ಮಹೇಶ್ ಕುಮಾರ್ ನಾಳೆ (ಮಾರ್ಚ್ 18) ಅಯೋಗ್ಯನ ಅವತಾರವನ್ನ ಪ್ರೇಕ್ಷಕರಿಗೆ ಪರಿಚಯ ಮಾಡಲಿದ್ದಾರೆ. ಸಿನಿಮಾದ ಮೊದಲ ಟೀಸರ್ ಬಿಡುಗಡೆ ಮಾಡಲಿದ್ದು ಈ ಮೂಲಕ ಕನ್ನಡ ಸಿನಿಮಾ ಅಭಿಮಾನಿಗಳಿಗೆ ಅಯೋಗ್ಯ ಚಿತ್ರದ ಬಗ್ಗೆ ಸಣ್ಣ ಪರಿಚಯ ಮಾಡಿಸಲಿದ್ದಾರೆ.
ಸಾಕಷ್ಟು ದಿನಗಳಿಂದ ಚಿತ್ರದ ಮೇಕಿಂಗ್ ಸ್ಟಿಲ್ ಮತ್ತು ಚಿತ್ರೀಕರಣದ ಸಮಯದಲ್ಲಿ ಫೋಟೋಗಳನ್ನ ನೋಡಿರುವ ಅಭಿಮಾನಿಗಳು ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ತೆರೆ ಮೇಲೆ ಒಂದಾಗಿರುವ ಸತೀಶ್ ಹಾಗೂ ರಚಿತಾ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕೌತುಕಕ್ಕೂ ನಾಳೆ ತೆರೆ ಬೀಳಲಿದೆ.
ಮಂಡ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷನಾದ ಖಳನಟ ರವಿಶಂಕರ್