ಸಂತೋಷ್ ಚಿತ್ರಮಂದಿರದಲ್ಲಿ ನಡೆಯಲಿದೆ 'ಆಯುಷ್ಮಾನ್ ಭವ' ಪ್ರೀ ರಿಲೀಸ್ ಕಾರ್ಯಕ್ರಮ
ಟಾಲಿವುಡ್ ನಲ್ಲಿ ಹೆಚ್ಚು ನಡೆಯುತ್ತಿದ್ದ ಪ್ರೀ ರಿಲೀಸ್ ಕಾರ್ಯಕ್ರಮ ಈಗ ಕನ್ನಡದಲ್ಲಿಯೂ ಜಾಸ್ತಿಯಾಗಿದೆ. 'ಆಯುಷ್ಮಾನ್ ಭವ' ಪ್ರೀ ರಿಲೀಸ್ ಕಾರ್ಯಕ್ರಮ ಇದೇ ತಿಂಗಳು ನಡೆಯುತ್ತಿದೆ.
ಸಂತೋಷ್ ಚಿತ್ರಮಂದಿರದಲ್ಲಿ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 27 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರತಂಡ ಹಾಗೂ ಶಿವರಾಜ್ ಕುಮಾರ್ ಅಭಿಮಾನಿಗಳು ಕಾರ್ಯಕ್ರಮ ಭಾಗಿಯಾಗಲಿದ್ದಾರೆ.
'ಆಯುಷ್ಮಾನ್ ಭವ' ಸಿನಿಮಾದ ಹಾಡುಗಳು ಈಗಾಗಲೇ ಬಿಡುಗಡೆಯಾಗಿದೆ. ಟೀಸರ್ ಕೂಢ ಪ್ರೇಕ್ಷಕರ ಮುಂದೆ ಬಂದಿದೆ. ಸಿನಿಮಾ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ವಿಶೇಷವಾಗಿ ಬಿಡುಗಡೆ ಆಗಲಿದೆ.

ಶಿವರಾಜ್ ಕುಮಾರ್, ಅನಂತ್ ನಾಗ್, ಅವಿನಾಶ್, ಸುಹಾಸಿನಿ, ರಚಿತಾ ರಾಮ್, ನಿಧಿ ಸುಬ್ಬಯ್ಯ ರಮೇಶ್ ಭಟ್ ಹಾಗೂ ಯಶ್ ಶೆಟ್ಟಿ ಸಿನಿಮಾದಲ್ಲಿ ನಟಿಸಿದ್ದಾರೆ. ಪಿ ವಾಸು ನಿರ್ದೇಶನ ಹಾಗೂ ದ್ವಾರಕೀಶ್ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನದ 50ನೇ ಸಿನಿಮಾ ಇದಾಗಿದೆ.
ಶಿವಲಿಂಗ ಸಿನಿಮಾದ ನಂತರ ಶಿವರಾಜ್ ಕುಮಾರ್ ಮತ್ತೆ ಪಿ ವಾಸು ಜೊತೆ ಒಂದಾಗಿದೆ. 'ಆಪ್ತಮಿತ್ರ' ಬಳಿಕ ದ್ವಾರಕೀಶ್ ಬ್ಯಾನರ್ ನಲ್ಲಿ ಪಿ ವಾಸು ಸಿನಿಮಾ ಮಾಡುತ್ತಿದ್ದಾರೆ.


Click it and Unblock the Notifications











