Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗಿದ್ದ ಶಿವಣ್ಣ ಅಭಿಮಾನಿಗಳಿಗೆ ನಿರಾಸೆ
Recommended Video
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಚಿತ್ರದ ಜೊತೆ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದರು. ಆದ್ರೀಗ, ಆ ಸಂಭ್ರಮಕ್ಕೆ ನಿರಾಸೆ ಎದುರಾಗಿದೆ.
ಹೌದು, ನವೆಂಬರ್ 1 ರಂದು ಬಿಡುಗಡೆಯಾಗಬೇಕಿದ್ದ ಆಯುಷ್ಮಾನ್ ಭವ ಸಿನಿಮಾ ಮುಂದೋಗಿದೆ. ಈ ಹಿಂದೆ ತೀರ್ಮಾನಿಸಿದಂತೆ ನವೆಂಬರ್ 1ಕ್ಕೆ ಆಯುಷ್ಮಾನ್ ಭವ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಮುಂದಿನ ದಿನಾಂಕವನ್ನ ಪ್ರಕಟ ಮಾಡದ ಚಿತ್ರತಂಡ ಸದ್ಯದಲ್ಲಿ ಅಧಿಕೃತವಾಗಿ ತಿಳಿಸಲಿದೆ.
ಸಂತೋಷ್ ಚಿತ್ರಮಂದಿರದಲ್ಲಿ ನಡೆಯಲಿದೆ 'ಆಯುಷ್ಮಾನ್ ಭವ' ಪ್ರೀ ರಿಲೀಸ್ ಕಾರ್ಯಕ್ರಮ
ಪ್ರಾಣಿದಯಾ ಸಂಘ ದಿಂದ ಅನುಮತಿ ಸಿಗದ ಕಾರಣ ಚಿತ್ರದ ಬಿಡುಗಡೆಗೆ ಸಮಸ್ಯೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. ನವೆಂಬರ್ ಮೂರನೇ ವಾರ ಅಂದ್ರೆ 15ನೇ ತಾರೀಕು ಚಿತ್ರಮಂದಿರಕ್ಕೆ ಬರಲು ಚಿಂತಿನೆ ನಡೆಸಿದೆಯಂತೆ ಚಿತ್ರತಂಡ.
'ಆಪ್ತಮಿತ್ರ' ಚಿತ್ರ ನೆನಪಿಸುವ 'ಆಯುಷ್ಮಾನ್ ಭವ' ಟ್ರೈಲರ್
ಇನ್ನುಳಿದಂತೆ ಪಿ ವಾಸು ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ದ್ವಾರಕೀಶ್ ನಿರ್ಮಿಸಿದ್ದರು. ಶಿವರಾಜ್ ಕುಮಾರ್ ನಾಯಕನಾಗಿರುವ ಈ ಚಿತ್ರದಲ್ಲಿ ರಚಿತಾ ರಾಮ್ ನಾಯಕಿಯಾಗಿದ್ದಾರೆ. ಅನಂತ್ ನಾಗ್, ತಮಿಳು ನಟ ಪ್ರಭು ಸೇರಿದಂತೆ ಹಲವರು ನಟಿಸಿದ್ದಾರೆ.
ಆಯುಷ್ಮಾನ್ ಭವ ಸಿನಿಮಾದ ಟ್ರೈಲರ್ ಮತ್ತು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಥ್ರಿಲ್ ಹೆಚ್ಚಿದೆ. ಆಪ್ತಮಿತ್ರ ಹಾಗೂ ಶಿವಲಿಂಗ ಸಿನಿಮಾ ಬಳಿಕ ಅಂತಹದ್ದೇ ಜಾನರ್ ಹೊಂದಿರುವ ಸಿನಿಮಾ ಇದು ಎಂಬ ಭರವಸೆ ಹುಟ್ಟಿಕೊಂಡಿದೆ.