Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಟಿ ಬಿ ಜಯಶ್ರೀಗೂ 'ಮೀಟೂ' ಅನುಭವ ಆಗಿತ್ತಂತೆ.!
ಸ್ಯಾಂಡಲ್ ವುಡ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಮೀಟೂ ಬಗ್ಗೆ ಹಿರಿಯ ನಟಿ ಬಿ ಜಯಶ್ರೀ ಮಾತನಾಡಿದ್ದಾರೆ. 'ನನಗೂ ಮೀಟೂ ಅನುಭವ ಆಗಿತ್ತು' ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. 'ವಿಸ್ಮಯ' ಚಿತ್ರೀಕರಣದ ವೇಳೆ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಸರ್ಜಾ ಯತ್ನಿಸಿದ್ದರು ಎಂದು ಆರೋಪ ಮಾಡಿದ್ದರು.
ಸರ್ಜಾ ವಿರುದ್ಧ ಶ್ರುತಿ ಬಳಿ ಇದೆಯಂತೆ 'ವಿಡಿಯೋ' ಸಾಕ್ಷಿ.!
ಈ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಇಬ್ಬರು ಕೋರ್ಟ್ ಮೊರೆ ಹೋಗಿದ್ದಾರೆ. ಹೀಗಿರಬೇಕಾದರೇ, ಹಿರಿಯ ನಟ ಜಯಶ್ರೀ 'ಮೀಟೂ' ಬಗ್ಗೆ ಬೇಸರದಿಂದ ಮಾತನಾಡಿದ್ದಾರೆ.
'ಗಂಡ ಹೆಂಡತಿ' ಸಂಧಾನ: ಆರೋಪ ಮಾಡಿದ್ದು ಸಂಜನಾ, 'ಸಾರಿ' ಕೇಳಿದ್ದು ಅವರೇ.!
''ನನಗೆ ಮೀಟೂ ಅನುಭವ ಆಗಿದೆ, ಅದು ನನಗೆ ಗೊತ್ತು. ನಿಮ್ಮ ಹತ್ರ ನಾನು ಯಾಕೆ ಹೇಳಿಕೊಳ್ಳಬೇಕು. ಅದು ತಪ್ಪು ಎಂಬುದು ನನ್ನ ಅಭಿಪ್ರಾಯ'' ಎಂದಿದ್ದಾರೆ.
ಸಂಗೀತಾ ಭಟ್ ಚಿತ್ರರಂಗ ಬಿಡಲು 'ಮೀಟೂ' ಕಾರಣವಲ್ಲ.! ಮತ್ತೇನು.?
'ಇವತ್ತು ಫೇಸ್ ಬುಕ್ ಇದೆ, ಸೋಶಿಯಲ್ ಮೀಡಿಯಾ ಇದೆ, ಅಭಿವ್ಯಕ್ತಿ ಸ್ವತಂತ್ರ ಇದೆ ಎಂದು ಹೇಳಿಕೊಳ್ಳುವುದು ಸರಿಯಲ್ಲ. ಅದಕ್ಕೂ ಲಕ್ಷ್ಮಣ ರೇಖೆ ಇದೆ. 'ಕಣ್ಣಾಮುಚ್ಚೆ ಕಾಡೇಗೂಡೆ' ಪುಸ್ತಕದಲ್ಲಿ ನನ್ನ ಮೇಲೆ ಆದ ಅನುಭವವನ್ನ ನಾನು ಬರೆದಿದ್ದೇನೆ. ಇದರಿಂದ ನ್ಯಾಯ ಸಿಗಬೇಕು ಎಂದಿಲ್ಲ. ಬಟ್, ಬೇರೆಯವರು ಎಚ್ಚೆತ್ತುಕೊಳ್ಳಲಿ'' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.