Don't Miss!
- Finance ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ 40.84 ಕೋಟಿ ರೂ. ಒಡೆಯ
- News DK Suresh Assets: ಕೋಟಿ ಕೋಟಿ ಒಡೆಯ ಡಿಕೆ ಸುರೇಶ್! ಇಲ್ಲೆಲ್ಲಾ ಇದೆ ಜಮೀನು, ಮನೆ, ಸಾಲ!
- Sports Virat Kohli vs Gautam Gambhir: ವಿರಾಟ್, ಗೌತಮ್ ನಡುವೆ ಬಿರುಕು ಹುಟ್ಟಲು ಕಾರವೇನು? ಇಲ್ಲಿದೆ ಮಾಹಿತಿ
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಟಿ ಬಿ ಜಯಶ್ರೀಗೂ 'ಮೀಟೂ' ಅನುಭವ ಆಗಿತ್ತಂತೆ.!
ಸ್ಯಾಂಡಲ್ ವುಡ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಮೀಟೂ ಬಗ್ಗೆ ಹಿರಿಯ ನಟಿ ಬಿ ಜಯಶ್ರೀ ಮಾತನಾಡಿದ್ದಾರೆ. 'ನನಗೂ ಮೀಟೂ ಅನುಭವ ಆಗಿತ್ತು' ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. 'ವಿಸ್ಮಯ' ಚಿತ್ರೀಕರಣದ ವೇಳೆ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಸರ್ಜಾ ಯತ್ನಿಸಿದ್ದರು ಎಂದು ಆರೋಪ ಮಾಡಿದ್ದರು.
ಸರ್ಜಾ ವಿರುದ್ಧ ಶ್ರುತಿ ಬಳಿ ಇದೆಯಂತೆ 'ವಿಡಿಯೋ' ಸಾಕ್ಷಿ.!
ಈ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಇಬ್ಬರು ಕೋರ್ಟ್ ಮೊರೆ ಹೋಗಿದ್ದಾರೆ. ಹೀಗಿರಬೇಕಾದರೇ, ಹಿರಿಯ ನಟ ಜಯಶ್ರೀ 'ಮೀಟೂ' ಬಗ್ಗೆ ಬೇಸರದಿಂದ ಮಾತನಾಡಿದ್ದಾರೆ.
'ಗಂಡ ಹೆಂಡತಿ' ಸಂಧಾನ: ಆರೋಪ ಮಾಡಿದ್ದು ಸಂಜನಾ, 'ಸಾರಿ' ಕೇಳಿದ್ದು ಅವರೇ.!
''ನನಗೆ ಮೀಟೂ ಅನುಭವ ಆಗಿದೆ, ಅದು ನನಗೆ ಗೊತ್ತು. ನಿಮ್ಮ ಹತ್ರ ನಾನು ಯಾಕೆ ಹೇಳಿಕೊಳ್ಳಬೇಕು. ಅದು ತಪ್ಪು ಎಂಬುದು ನನ್ನ ಅಭಿಪ್ರಾಯ'' ಎಂದಿದ್ದಾರೆ.
ಸಂಗೀತಾ ಭಟ್ ಚಿತ್ರರಂಗ ಬಿಡಲು 'ಮೀಟೂ' ಕಾರಣವಲ್ಲ.! ಮತ್ತೇನು.?
'ಇವತ್ತು ಫೇಸ್ ಬುಕ್ ಇದೆ, ಸೋಶಿಯಲ್ ಮೀಡಿಯಾ ಇದೆ, ಅಭಿವ್ಯಕ್ತಿ ಸ್ವತಂತ್ರ ಇದೆ ಎಂದು ಹೇಳಿಕೊಳ್ಳುವುದು ಸರಿಯಲ್ಲ. ಅದಕ್ಕೂ ಲಕ್ಷ್ಮಣ ರೇಖೆ ಇದೆ. 'ಕಣ್ಣಾಮುಚ್ಚೆ ಕಾಡೇಗೂಡೆ' ಪುಸ್ತಕದಲ್ಲಿ ನನ್ನ ಮೇಲೆ ಆದ ಅನುಭವವನ್ನ ನಾನು ಬರೆದಿದ್ದೇನೆ. ಇದರಿಂದ ನ್ಯಾಯ ಸಿಗಬೇಕು ಎಂದಿಲ್ಲ. ಬಟ್, ಬೇರೆಯವರು ಎಚ್ಚೆತ್ತುಕೊಳ್ಳಲಿ'' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.