Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಲೆಂಜಿಂಗ್ ಸ್ಟಾರ್ 'ಮೆಜೆಸ್ಟಿಕ್' ಪುನರ್ ನಿರ್ಮಾಣ
ಮೂಲ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಪಿ.ಎನ್. ಸತ್ಯ ಅವರೇ ಈ ಚಿತ್ರಕ್ಕೂ ನಿರ್ದೇಶಕರು. ಫೆಬ್ರವರಿ 8, 2002ರಲ್ಲಿ ತೆರೆಕಂಡಿದ್ದ ಈ ಚಿತ್ರ ಶತದಿನೋತ್ಸವ ಆಚರಿಕೊಂಡಿದ್ದು. ದರ್ಶನ್ ಪೂರ್ನ ಪ್ರಮಾಣದ ನಾಯಕ ನಟನಾಗಿ ಅಭಿನಯಿಸಿದ ಈ ಚಿತ್ರ ಅವರ ವೃತ್ತಿ ಬದುಕಿಗೆ ಮಹತ್ತರ ತಿರುವು ನೀಡಿತು.
'ದಾಸ' ನಾಗಿ ದರ್ಶನ್ ಈ ಚಿತ್ರದಲ್ಲಿ ಅಭಿನಯಿಸಿದ್ದರು. ರೇಖಾ, ವನಿತಾ ವಾಸು, ಸಾಧು ಕೋಕಿಲ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. 2002ರಲ್ಲಿ ಈ ಚಿತ್ರವನ್ನು ಸುಮಾರು ರು.60 ಲಕ್ಷದಲ್ಲಿ ನಿರ್ಮಿಸಲಾಗಿತ್ತು. ಈಗ ಇದಕ್ಕಿಂತಲೂ ನಾಲ್ಕೈದು ಪಟ್ಟು ಜಾಸ್ತಿ ಬಜೆಟ್ ನಲ್ಲಿ ಚಿತ್ರವನ್ನು ಪುನರ್ ನಿರ್ಮಿಸಲು ಹರೀಶ್ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
'ಮೆಜೆಸ್ಟಿಕ್' ಹೊಸ ಚಿತ್ರದಲ್ಲಿ ಬಹುತೇಕ ಹಳೆ ಕಲಾವಿದರೇ ಇರುತ್ತಾರೆ. ಆದರೆ ದರ್ಶನ್ ಹಾಗೂ ರೇಖಾ ಮಾತ್ರ ಇರುವುದಿಲ್ಲ. ನಾಯಕ ನಾಯಕಿ ಹೊಸಬರು ಎನ್ನುತ್ತಾರೆ ಹರೀಶ್. ಕಲಾವಿದರ ಆಯ್ಕೆ ಬಳಿಕ ಚಿತ್ರೀಕರಣ ಶುರುವಾಗಲಿದೆ.
ಹಳೆಯ ಮೆಜೆಸ್ಟಿಕ್ ಕಥೆಯನ್ನೇ ರಿಚ್ ಆಗಿ ತೋರಿಸಲು ಮುಂದಾಗಿದ್ದಾರೆ ಹರೀಶ್. ಈಗಿನ ಮೆಜೆಸ್ಟಿಕ್ ಬಹಳಷ್ಟು ಬದಲಾಗಿದೆ. ಕಥೆಯಲ್ಲೂ ಅಲ್ಪ ಸ್ವಲ್ಪ ಬದಲಾವಣೆಯಗಳನ್ನು ನಿರೀಕ್ಷಿಸಬಹುದು. ದರ್ಶನ್ ಇಲ್ಲದ ಮೆಜೆಸ್ಟಿಕ್ ಚಿತ್ರವನ್ನು ಪ್ರೇಕ್ಷಕರು ಎಷ್ಟರ ಮಟ್ಟಿಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದುನೋಡಬೇಕು. (ಏಜೆನ್ಸೀಸ್)