Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬದ ದಿನ 'ಬ್ಯಾಡ್ ಮ್ಯಾನರ್ಸ್' ಆಗಿ ಬಂದ ಅಭಿಷೇಕ್
ಸ್ಯಾಂಡಲ್ ವುಡ್ ನಟ, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 27ನೇ ವಸಂತಕ್ಕೆ ಕಾಲಿಟ್ಟಿರುವ ಅಭಿಷೇಕ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕಳೆದ ವರ್ಷವೂ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಅಭಿಷೇಕ್ ಈ ವರ್ಷ ಕೊರೊನಾ ಹಾವಳಿಯ ಪರಿಣಾಮ ಸಿಂಪಲ್ ಆಗಿ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.
Recommended Video
ವಿಶೇಷ ಅಂದರೆ ಈ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅಭಿಷೇಕ್ 'ಬ್ಯಾಡ್ ಮ್ಯಾನರ್ಸ್' ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಭಿಷೇಕ್ ಅಭಿನಯದ ಬಹುನಿರೀಕ್ಷೆಯ 'ಬ್ಯಾಡ್ ಮ್ಯಾನರ್ಸ್' ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದೆ.
'ಎಣ್ಣೆ ಹೊಡೀತೀರಾ?' ಅಭಿಮಾನಿಯ ಪ್ರಶ್ನೆಗೆ ಅಭಿಷೇಕ್ ಅಂಬರೀಶ್ ಉತ್ತರ
ಅಭಿಷೇಕ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಸಿನಿಮಾದಲ್ಲಿ ಲವರ್ ಬಾಯ್ ಆಗಿ ಕಾಣಿಸಿಕೊಂಡಿದ್ದ ಅಂಬಿ ಪುತ್ರ ಈ ಬಾರಿ ಮಾಸ್ ಲುಕ್ ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಅಂದರೆ ಲಾಕ್ ಡೌನ್ ಸಮಯದಲ್ಲಿ ಫಸ್ಟ್ ಲುಕ್ ರಿಲೀಸ್ ಮಾಡಲಾಗಿತ್ತು ಇದೀಗ ಹುಟ್ಟುಹಬ್ಬದ ಪ್ರಯುಕ್ತ ಪುಟ್ಟ ಟೀಸರ್ ಬಿಡುಗಡೆ ಮಾಡಲಾಗಿದೆ.
ಅಭಿಷೇಕ್ ವಿಭಿನ್ನ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಂದ್ಹಾಗೆ ಬ್ಯಾಡ್ ಮ್ಯಾನರ್ಸ್ ನಿರ್ದೇಶಕ ಸುಕ್ಕಾ ಸೂರಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಬಳಿಕ ಸೂರಿ ನಿರ್ದೇಶನ ಮಾಡುತ್ತಿರುವ ಚಿತ್ರವಿದು. ಅಭಿಷೇಕ್ ಮತ್ತು ಸೂರಿ ಕಾಂಬಿನೇಷನ್ ನ 'ಬ್ಯಾಡ್ ಮ್ಯಾನರ್ಸ್' ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.
ವಿಶೇಷ ಅಂದರೆ ಸೂರಿ ಅವರ 'ಪಾಪ್ ಕಾರ್ನ್ ಮಂಕಿ ಟೈಗರ್'ನಲ್ಲಿ ಕೆಲಸ ಮಾಡಿದ್ದ ತಂಡವೇ ಇಲ್ಲಿಯೂ ಕೆಲಸ ಮಾಡಲಿದೆ. ಸ್ಟುಡಿಯೋ 18 ಬ್ಯಾನರ್ ಅಡಿ ಸುಧೀರ್ ಕೆಎಂ ನಿರ್ಮಾಣ ಮಾಡುತ್ತಿದ್ದಾರೆ. ಚರಣ್ ರಾಜ್ ಸಂಗೀತ ಚಿತ್ರಕ್ಕಿದೆ. ಶೇಖರ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ ಇರಲಿದೆ. ದುನಿಯಾ ಸೂರಿ ಜತೆಗೂಡಿ ಅಮೃತ್ ಭಾರ್ಗವ್ ಕಥೆ ಹಾಗೂ ಚಿತ್ರಕಥೆ ಕೆಲಸ ನಿರ್ವಹಿಸುತ್ತಿದ್ದಾರೆ. ಉಳಿದಂತೆ ಚಿತ್ರದ ನಾಯಕಿ, ವಿಲನ್ ಹಾಗೂ ಇತರ ಕಲಾವಿದರ ಆಯ್ಕೆ ಬಹಿರಂಗವಾಗಿಲ್ಲ. ಅಭಿಷೇಕ್ ಗೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.