Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಸ್ತ್ ಮಜಾ ನೀಡುವ 'ಬಡ್ಡಿ ಮಗನ್ ಲೈಫು' ಟ್ರೇಲರ್
''ಕೈ ಕಾಲ್ ಮುರಿದು ದೇವಸ್ಥಾನದ ಮುಂದೆ ಕೂರಿಸ್ತಿನಿ.. ಬಿಕ್ಷೆ ಬೇಡದರೂ ಬಡ್ಡಿ ಕಟ್ಲಿ..'' ಇದು ಬಡ್ಡಿ ದುಡ್ಡು ನೀಡುವ ಬಡ್ಡಿ ಸೀನಪ್ಪ ಹೇಳುವ ಡೈಲಾಗ್.
'ಬಡ್ಡಿ ಮಗನ್ ಲೈಫು' ಸಿನಿಮಾ ಟ್ರೇಲರ್ ಕಳೆದ ಶುಕ್ರವಾರ ಬಿಡುಗಡೆಯಾಗಿದೆ. ಟ್ರೇಲರ್ ಗೆ ಯೂಟ್ಯೂಬ್ ನಲ್ಲಿ ಮೆಚ್ಚುಗೆ ಮಾತುಗಳು ಸಿಗುತ್ತಿವೆ. ಚಿತ್ರರಂಗದ ಅನೇಕರು ಈ ಪ್ರತಿಭಾವಂತ ಹುಡುಗರ ಪ್ರಯತ್ನವನ್ನು ಪ್ರೊತ್ಸಾಹಿಸುತ್ತಿದ್ದಾರೆ.
ವರ್ಷಾಂತ್ಯದಲ್ಲಿ ಮೂರು ದೊಡ್ಡ ಸಿನಿಮಾಗಳಿಂದ ಸಿಹಿ ಸುದ್ದಿ
ಮೈಸೂರಿನ ಪ್ರತಿಭಾವಂತ ಹುಡುಗರು ಸೇರಿ ಈ ಸಿನಿಮಾ ಮಾಡಿದ್ದಾರೆ. ಸಿನಿಮಾದ ಟ್ರೇಲರ್ ಇಂಟ್ರೆಸ್ಟಿಂಗ್ ಆಗಿದೆ. ಪ್ರಮುಖವಾಗಿ ಲವಿತ್ ಅವರ ಕ್ಯಾಮರಾ ವರ್ಕ್ ತುಂಬ ಚೆನ್ನಾಗಿದೆ. ಟ್ರೇಲರ್, ಸಿನಿಮಾದ ಮೇಲೆ ಭರವಸೆ ಹುಟ್ಟಿಸಿದೆ. ಪವನ್ ಪ್ರಸಾದ್ ಸಿನಿಮಾದ ನಿರ್ದೇಶನ ಮಾಡಿದ್ದಾರೆ.
ಹೊಸತನದಿಂದ ಟ್ರೇಲರ್ ಕೂಡಿದೆ. ಸಿನಿಮಾದ ಪಾತ್ರಗಳನ್ನು, ಸನ್ನಿವೇಶಗಳನ್ನು ಪರಿಚಯಿಸಿರುವ ರೀತಿ ಎಲ್ಲರ ಗಮನ ಸೆಳೆದಿದೆ. ಟ್ರೇಲರ್ ತುಂಬ ನೀಟ್ ಆಗಿದೆ. ಬಲ ರಾಜ್ವಾಡಿ, ಸಚಿನ್ ಶ್ರೀಧರ್, ಐಶ್ವರ್ಯ ರಾವ್, ರಜನಿಕಾಂತ್ ಸಿನಿಮಾದಲ್ಲಿ ನಟಿಸಿದ್ದಾರೆ.
'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾ ಶುಭಾರಂಭ
'ಲೂಸಿಯಾ' ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಈಗಾಗಲೇ ನವೀನ್ ಸಜ್ಜು ಹಾಡಿರುವ 'ಏನ್ ಚಂದಾನೋ ತಕೋ..' ಹಾಡು ಸೂಪರ್ ಹಿಟ್ ಆಗಿದೆ.
ಪವನ್ ಕುಮಾರ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಒಳ್ಳೆಯ ಸಿನಿಮಾ ಮಾಡಬೇಕು ಎನ್ನುವ ಪ್ರಾಮಾಣಿಕ ಪ್ರಯತ್ನದಲ್ಲಿ ಚಿತ್ರತಂಡ ಗೆದ್ದಿದೆ. ಡಿಸೆಂಬರ್ 27ಕ್ಕೆ ಸಿನಿಮಾ ರಾಜ್ಯಾದಂತ್ಯ ಬಿಡುಗಡೆಯಾಗುತ್ತಿದೆ. ಜನರ ಪ್ರತಿಕ್ರಿಯೆಗಾಗಿ ಚಿತ್ರತಂಡ ಕಾಯುತ್ತಿದೆ.