Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಹುಬಲಿ ನಟ ರಾಣಾಗೆ ಕಿಡ್ನಿ ವೈಫಲ್ಯ : ಮಗನಿಗಾಗಿ ಕಿಡ್ನಿ ದಾನ ಮಾಡಿದ ತಾಯಿ
ಭಾರತೀಯ ಚಿತ್ರರಂಗ ಮಾತ್ರವಲ್ಲದೆ ಇಡೀ ವಿಶ್ವವೆ ಬೆರಗಾಗುವಂತೆ ಮಾಡಿದ್ದ ಸೂಪರ್ ಹಿಟ್ ಬಾಹುಬಲಿ ಚಿತ್ರದ ಬಲ್ಲಾಳ ದೇವನ ಬಗ್ಗೆ ದೊಡ್ಡ ಬ್ರೇಕಿಂಗ್ ಸುದ್ದಿಯೊಂದು ಹರಿದಾಡುತ್ತಿದೆ. ಬಾಹುಬಲಿಯಲ್ಲಿ ಬಲ್ಲಾಳದೇವನಾಗಿ ಅಬ್ಬರಿಸಿ ಅಭಿಮಾನಿಗಳ ಹೃದಯಗೆದ್ದಿದ್ದ ರಾಣದಗ್ಗುಬಾಟಿ ಆನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನುವ ಸುದ್ದಿ ಭಾರಿ ವೈರಲ್ ಆಗಿದೆ.
ಹೌದು, ರಾಣಾ ದಗ್ಗುಬಾಟಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರಂತೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗೆ ರಾಣಾ ಕುಟುಂಬ ಸಮೇತರಾಗಿ ಯು ಎಸ್ ಎಗೆ ತೆರಳಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅನೇಕ ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರಾಣಾ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದ್ರೆ ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಿದ್ದಾರೆ.
ರಾಣ ದಗ್ಗುಬಾಟಿ ಸಿನಿಮಾದಿಂದ ಹೊರ ನಡೆಯುವುದಾಗಿ ಬೆದರಿಕೆ ಹಾಕಿದ್ರಾ ಸಾಯಿ ಪಲ್ಲವಿ?
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರಾಣಾಗೆ ಅವರ ತಾಯಿಯೆ ಕಿಡ್ನಿಯನ್ನು ದಾನಾ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ವಿಚಾರ ಕೇಳಿ ರಾಣಾ ಅಭಿಮಾನಿಗಳು ಶಾಕ್ ಆಗಿದ್ದಾರೆ. ಈ ಬಗ್ಗೆ ರಾಣಾ ಕಡೆಯಿಂದ ಆಗಲಿ ಅಥವಾ ಅವರ ಆಪ್ತರ ಕಡೆಯಿಂದ ಯಾವುದೆ ಸ್ಪಷ್ಟೀಕರಣ ಬಂದಿಲ್ಲ. ರಾಣಾ ದಿಢೀರನೆ ಆನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಅಭಿಮಾನಿಗಳೀಗ ಆತಂಕದಲ್ಲಿದ್ದಾರೆ.
ಇತ್ತೀಚಿಗೆ ರಾಣಾ ವಿರಾಟ ಪರ್ವಂ ಸಿನಿಮಾದಲ್ಲಿ ಬ್ಯುಸಿಯಾಗಿದ್ದರು. ಆದ್ರೆ ಅನೇಕ ದಿನಗಳಿಂದ ರಾಣಾ ಚಿತ್ರೀಕರಣಕ್ಕೆ ಹೋಗಿಲ್ಲವಂತೆ. ಹಾಗಾಗಿ ರಾಣಾ ಬಗ್ಗೆ ಎದ್ದಿರುವ ಈ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದಂತೆ ಆಗಿದೆ. ಆದ್ರೆ ಈ ಸುದ್ದಿ ನಿಜಾನಾ ಅಥವಾ ರೂಮರ್ ಎನ್ನುವ ಬಗ್ಗೆ ರಾಣಾನೆ ಬಹಿರಂಗ ಪಡಿಸಬೇಕಾಗಿದೆ.