Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಬ್ಬರು ಖಳನಾಯಕರನ್ನ ಪರಿಚಯಿಸಲು ಬಂದ್ರು ಹ್ಯಾಟ್ರಿಕ್ ಹೀರೋ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಬ್ಬರು ಖಳನಟರನ್ನು ಪ್ರೇಕ್ಷಕರಿಗೆ ಪರಿಚಯಿಸಲು ಮುಂದಾಗಿದ್ದಾರೆ. ಹಾಗಂತ ಆ ನಟರು ಚಿತ್ರರಂಗಕ್ಕೆ ಹೊಸಬರೇನಲ್ಲಾ. ಈಗಾಗಲೇ ನಿಮ್ಮೆಲ್ಲರಿಗೂ ಅವರ ಪರಿಚಯವಿದೆ.
ಹೌದು ಶಿವರಾಜ್ ಕುಮಾರ್ ಸಿನಿಪ್ರಿಯರಿಗೆ ಪರಿಚಯ ಮಾಡಿಸಿದ್ದು ನಟ ರವಿಚಂದ್ರನ್ ಮತ್ತು ಆರ್ ಜೆ ರೋಹಿತ್ ಅವರನ್ನ . ಇದೇ ತಿಂಗಳು ಬಿಡುಗಡೆ ಆಗುತ್ತಿರುವ ಬಕಾಸುರ ಸಿನಿಮಾದ ಎರಡನೇ ಟ್ರೇಲರ್ ಬಿಡುಗಡೆ ಆಗಿದೆ. ಶಿವಣ್ಣ ಟ್ರೇಲರ್ ನಲ್ಲಿ ಚಿತ್ರದ ಮುಖ್ಯಪಾತ್ರಗಳನ್ನ ಪರಿಚಯಿಸಿದ್ದಾರೆ. ಈ ಮೂಲಕ ಬಕಾಸುರ ಸಿನಿಮಾ ಟ್ರೇಲರ್ ಸಖತ್ ಸುದ್ದಿ ಮಾಡುತ್ತಿದೆ.
ಅಪೂರ್ವ' ನಂತರ ಕಾಣೆಯಾಗಿದ್ದ ನಟಿಗೆ ಮತ್ತೊಂದು ದೊಡ್ಡ ಅವಕಾಶ.!
ಬಕಾಸುರ ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ಆರ್ ಜೆ ರೋಹಿತ್ ಮುಖ್ಯಭೂಮಿಕೆಯಲ್ಲಿರುವ ಸಿನಿಮಾ. ಕಾವ್ಯ ಗೌಡ ಮತ್ತು ಸಿತಾರ ಚಿತ್ರದಲ್ಲಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ನವನೀತ್ ಚಿತ್ರವನ್ನ ನಿರ್ದೇಶನ ಮಾಡಿದ್ದು ನಟ ರೋಹಿತ್ ಅವರೇ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಕರ್ವ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೆಸರು ಮಾಡಿರುವ ನವನೀತ್ ಮತ್ತು ಆರ್ ಜೆ ರೋಹಿತ್ 'ಬಕಾಸುರ' ಸಿನಿಮಾದಲ್ಲಿಯೂ ಪ್ರೇಕ್ಷಕರಿಗೆ ಒಂದೊಳ್ಳೆ ಮನೋರಂಜನೆ ನೀಡಲಿದ್ದಾರೆ ಎನ್ನುವ ಸೂಚನೆ ಈಗಾಗಲೇ ಸಿಕ್ಕಿದೆ.
ವಿಡಿಯೋ: 'ಕುರುಕ್ಷೇತ್ರ' ಚಿತ್ರದ ಎಕ್ಸ್ ಕ್ಲೂಸಿವ್ ಮೇಕಿಂಗ್