Don't Miss!
- News "ಅಲ್ಲಾ ಹೋ ಅಕ್ಬರ್" ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ 48ನೇ ಹುಟ್ಟುಹಬ್ಬಕ್ಕೆ ಶುಭ ಕೋರಿದ ಬಾಲಕೃಷ್ಣ ಸಿನಿಮಾದ ನಿರ್ದೇಶಕ
ಕನ್ನಡ ಚಿತ್ರರಂಗ 'ಸಲಗ' ದುನಿಯಾ ವಿಜಯ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ದುನಿಯಾ ವಿಜಯ್ ಇಂದು (ಜನವರಿ 20) 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರು ಸ್ಯಾಂಡಲ್ವುಡ್ 'ಬ್ಲ್ಯಾಕ್ ಕೋಬ್ರಾ'ಗೆ ಶುಭ ಕೋರುತ್ತಿದ್ದಾರೆ. ಅದರಲ್ಲೂ ದುನಿಯಾ ವಿಜಯ್ ನಟಿಸುತ್ತಿರುವ ಮೊದಲ ತೆಲುಗು ಸಿನಿಮಾದ ನಿರ್ದೇಶಕ ಗೋಪಿಚಂದ್ ಮಲಿನೇನಿ ಶುಭ ಹಾರೈಸಿದ್ದಾರೆ.
Recommended Video
ಕಳೆದ ವರ್ಷ 'ಸಲಗ' ಚಿತ್ರದಿಂದ ದುನಿಯಾ ವಿಜಯ್ ವೃತ್ತಿ ಬದುಕಿಗೆ ಹೊಸ ತಿರುವು ಸಿಕ್ಕಿತ್ತು. ಒಂದಿಷ್ಟು ವೈಯುಕ್ತಿಕ ಜೀವನ ಗೊಂದಲಗಳಿಂದ ಸಿನಿಮಾಗಳಿಂದ ದೂರವಿದ್ದ ವಿಜಯ್ ನಿರ್ದೇಶನದ ಮೂಲಕ ಹೊಸ ಸಂಚಲನವನ್ನು ಸೃಷ್ಟಿಸಿದ್ದರು. ವಿಜಯ್ ನಿರ್ದೇಶಿಸಿದ ಮೊದಲ ಸಿನಿಮಾ 'ಸಲಗ' ಬಾಕ್ಸಾಫೀಸ್ನಲ್ಲಿ ಚಿಂದಿ ಉಡಾಯಿಸಿತ್ತು. ಇದೇ ಯಶಸ್ಸಿನ ಖುಷಿಯಲ್ಲೇ ತೆಲುಗು ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.
|
ವಿಜಯ್ಗೆ ತೆಲುಗು ನಿರ್ದೇಶಕನಿಂದ ಶುಭಾಶಯ
ದುನಿಯಾ ವಿಜಯ್ 'ಸಲಗ' ಸಿನಿಮಾದ ಬಳಿಕ ತೆಲುಗು ಸಿನಿಮಾದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಇದು ಟಾಲಿವುಡ್ 'ಲೆಜೆಂಡ್' ಬಾಲಕೃಷ್ಣ ನಟಿಸುತ್ತಿರುವ 107ನೇ ಸಿನಿಮಾ. ಈ ಚಿತ್ರದಲ್ಲಿ ದುನಿಯಾ ವಿಜಯ್ ಪವರ್ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ ಬಾಲಕೃಷ್ಣ ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ಶುಭ ಹಾರೈಸಿದ್ದಾರೆ. " ಹುಟ್ಟುಹಬ್ಬದ ಶುಭಾಶಗಳು ವಿಜಯ್ ಅಣ್ಣ. ಈ ವರ್ಷ ನಿಮ್ಮ ಪಾಲಿಗೆ ಬ್ಲಾಕ್ಬಸ್ಟರ್ ಆಗಲಿ." ಎಂದು ಗೋಪಿಚಂದ್ ಮಲಿನೇನಿ ಟ್ವಿಟರ್ನಲ್ಲಿ ವಿಶ್ ಮಾಡಿದ್ದಾರೆ.
ವಿಜಯ್ ಬರ್ತ್ಡೇ ಆಚರಣೆ ಮಾಡಿಕೊಳ್ಳಲ್ಲ
ದುನಿಯಾ ವಿಜಯ್ ಕಳೆದ ವರ್ಷ ಕೊರೊನಾ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಅಂತೆಯೇ ಈ ವರ್ಷ ಬರ್ತ್ಡೇ ಆಚರಿಸಿಕೊಳ್ಳಲು ಇಷ್ಟಪಡುವುದಿಲ್ಲವೆಂದು ವಿಜಯ್ ಅಭಿಮಾನಿಗಳಿಗೆ ತಿಳಿಸಿದ್ದರು. ಒಂದು ಕಡೆ ಕೊರೊನಾ ಕಾರಣ. ಇನ್ನೊಂದು ಕಡೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ನೋವಿದೆ. ಜೊತೆ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆಯ ನೋವಿನಿಂದಾಗಿ ಈ ಬಾರಿ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಣೆ ಮಾಡಿಕೊಳ್ಳದೆ ಇರಲು ನಿರ್ಧರಿಸಿದ್ದಾರೆ.
ವಿಜಯ್ ಹೊಸ ದುನಿಯಾ ಆರಂಭ
2022 ದುನಿಯಾ ವಿಜಯ್ ವೃತ್ತಿ ಬದುಕಿಗೆ ಹೊಸ ತಿರುವು ಸಿಗಲಿದೆ. 'ಸಲಗ'ದಂತಹ ಸೂಪರ್ ಹಿಟ್ ಸಿನಿಮಾ ನೀಡಿರುವ ದುನಿಯಾ ವಿಜಯ್ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ವಿಜಯ್ ಮತ್ತೊಂದು ದುನಿಯಾಗೆ ಕಾಲಿಡುತ್ತಿದ್ದಾರೆ. ಈ ಮೂಲಕ ಟಾಲಿವುಡ್ನಲ್ಲೂ ಅಬ್ಬರಿಸಲು ಕಾತುರರಾಗಿದ್ದಾರೆ. ಇದೇ ವರ್ಷ ವಿಜಯ್ ಅಭಿನಯದ ಮೊದಲ ತೆಲುಗು ಸಿನಿಮಾ ಸಿನಿಮಾ ಬಿಡುಗಡೆಯಾಗಲಿದೆ. ಹೀಗಾಗಿ ವೃತ್ತಿ ಬದುಕಿನಲ್ಲಿ ಹೊಸ ತಿರುವು ಸಿಗುವ ನಿರೀಕ್ಷೆಯಲ್ಲಿದ್ದಾರೆ.
ಜನವರಿಯಿಂದ ತೆಲುಗು ಸಿನಿಮಾ ಶೂಟಿಂಗ್
ದುನಿಯಾ ವಿಜಯ್ ಹಾಗೂ ಬಾಲಕೃಷ್ಣ ಸಿನಿಮಾದ ಚಿತ್ರೀಕರಣ ಜನವರಿ ತಿಂಗಳಲ್ಲೇ ಆರಂಭ ಆಗಲಿದೆ. ಸಂಕ್ರಾಂತಿ ಸಿನಿಮಾದ ಬಳಿಕ ಶೂಟಿಂಗ್ ಶುರುವಾಗುತ್ತೆ ಎಂದು ದುನಿಯಾ ವಿಜಯ್ ಫಿಲ್ಮಿ ಬೀಟ್ಗೆ ತಿಳಿಸಿದ್ದರು. ದುನಿಯಾ ವಿಜಯ್ ಟಾಲಿವುಡ್ ಸೂಪರ್ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಎದುರು ಅಬ್ಬರಿಸಲಿದ್ದಾರೆ. ದುನಿಯಾ ವಿಜಯ್ ಖಳನಾಯಕನ ಪಾತ್ರಕ್ಕೆ ಹೊಸ ವ್ಯಾಖ್ಯಾನ ನೀಡಲಿದ್ದಾರೆ ಎಂದು ನಿರ್ದೇಶಕ ಗೋಪಿಚಂದ್ ಮಲಿನೇನಿ ಈ ಹಿಂದೆ ಹೇಳಿದ್ದರು.