Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಮ್ಮೆ ಕನ್ನಡದ ಕೀರ್ತಿ ಎತ್ತಿಹಿಡಿದ 'ತಿಥಿ' ಖ್ಯಾತಿಯ ಈರೇಗೌಡ
'ತಿಥಿ'... ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆ ಪಡುವಂತಹ ಚಿತ್ರ. ಭಾರತೀಯ ಚಿತ್ರರಂಗವೇ ಒಮ್ಮೆ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡಿ, ಈ ರೀತಿಯಲ್ಲೂ ಸಿನಿಮಾ ಮಾಡಬಹುದಾ ಎಂದು ಪ್ರತಿಯೊಬ್ಬರನ್ನೂ ಆಶ್ಚರ್ಯ ಪಡುವಂತೆ ಮಾಡಿದ ಚಿತ್ರ.
'ತಿಥಿ' ಚಿತ್ರಕ್ಕೆ ಕಥೆ ಬರೆದಿದ್ದ ಈರೇಗೌಡ ಈಗ 'ಬಳೆಕೆಂಪ' ಎಂಬ ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಚಿತ್ರೀಕರಣದ ಹಂತದಲ್ಲಿರುವ 'ಬಳೆಕೆಂಪ' ಸಿನಿಮಾ ಪ್ರಶಸ್ತಿಯನ್ನ ಗಿಟ್ಟಿಸಿಕೊಂಡಿದೆ.
'ಬಳೆಕೆಂಪ' ಸಿನಿಮಾ ರಾಷ್ಟ್ರೀಯ ಚಲನಚಿತ್ರ ಅಭಿವೃದ್ದಿ ನಿಗಮ ನಿಯಮಿತಿ (National Film Development Corporation Limited) ವತಿಯಿಂದ ವರ್ಕ್ ಇನ್ ಪ್ರೋಗ್ರೆಸ್ ಲಾಬ್ ಇನ್ ಪ್ರಶಸ್ತಿಯನ್ನ ಪಡೆದುಕೊಂಡಿದೆ. ಗೋವಾದಲ್ಲಿ ನಡೆಯುತ್ತಿರುವ 'ಐ ಎಫ್ ಎಫ್ ಐ' (ಇಂಟರ್ ನ್ಯಾಷನಲ್ ಫಿಲ್ಮಂ ಫೆಸ್ಟಿವಲ್ ಆಫ್ ಇಂಡಿಯಾ) ನಲ್ಲಿ ಇನ್ನೂ ಚಿತ್ರೀಕರಣ ಮುಗಿಯದ 'ಬಳೆಕೆಂಪ' ಚಿತ್ರ ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ಕಳೆದ ಬಾರಿ 'ತಿಥಿ' ಸಿನಿಮಾ ಕೂಡ ವರ್ಕ್ ಇನ್ ಪ್ರೋಗ್ರೆಸ್ ಲಾಬ್ ಇನ್ ಪ್ರಶಸ್ತಿಯನ್ನ ಪಡೆದುಕೊಂಡಿತ್ತು. ಒಟ್ಟಾರೆ ಚಿತ್ರೀಕರಣ ಹಂತದಲ್ಲೇ ಯಶಸ್ಸು ಪಡೆದುಕೊಂಡಿರುವ 'ಬಳೆಕೆಂಪ' ಚಿತ್ರ ತೆರೆ ಮೇಲೆ ಬಂದಾಗ ಪ್ರೇಕ್ಷಕರನ್ನ ಮೋಡಿ ಮಾಡೋದ್ರಲ್ಲಿ ಅನುಮಾನವಿಲ್ಲ.