Don't Miss!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಮ್ಮೆ ಕನ್ನಡದ ಕೀರ್ತಿ ಎತ್ತಿಹಿಡಿದ 'ತಿಥಿ' ಖ್ಯಾತಿಯ ಈರೇಗೌಡ
'ತಿಥಿ'... ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆ ಪಡುವಂತಹ ಚಿತ್ರ. ಭಾರತೀಯ ಚಿತ್ರರಂಗವೇ ಒಮ್ಮೆ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡಿ, ಈ ರೀತಿಯಲ್ಲೂ ಸಿನಿಮಾ ಮಾಡಬಹುದಾ ಎಂದು ಪ್ರತಿಯೊಬ್ಬರನ್ನೂ ಆಶ್ಚರ್ಯ ಪಡುವಂತೆ ಮಾಡಿದ ಚಿತ್ರ.
'ತಿಥಿ' ಚಿತ್ರಕ್ಕೆ ಕಥೆ ಬರೆದಿದ್ದ ಈರೇಗೌಡ ಈಗ 'ಬಳೆಕೆಂಪ' ಎಂಬ ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಚಿತ್ರೀಕರಣದ ಹಂತದಲ್ಲಿರುವ 'ಬಳೆಕೆಂಪ' ಸಿನಿಮಾ ಪ್ರಶಸ್ತಿಯನ್ನ ಗಿಟ್ಟಿಸಿಕೊಂಡಿದೆ.
'ಬಳೆಕೆಂಪ' ಸಿನಿಮಾ ರಾಷ್ಟ್ರೀಯ ಚಲನಚಿತ್ರ ಅಭಿವೃದ್ದಿ ನಿಗಮ ನಿಯಮಿತಿ (National Film Development Corporation Limited) ವತಿಯಿಂದ ವರ್ಕ್ ಇನ್ ಪ್ರೋಗ್ರೆಸ್ ಲಾಬ್ ಇನ್ ಪ್ರಶಸ್ತಿಯನ್ನ ಪಡೆದುಕೊಂಡಿದೆ. ಗೋವಾದಲ್ಲಿ ನಡೆಯುತ್ತಿರುವ 'ಐ ಎಫ್ ಎಫ್ ಐ' (ಇಂಟರ್ ನ್ಯಾಷನಲ್ ಫಿಲ್ಮಂ ಫೆಸ್ಟಿವಲ್ ಆಫ್ ಇಂಡಿಯಾ) ನಲ್ಲಿ ಇನ್ನೂ ಚಿತ್ರೀಕರಣ ಮುಗಿಯದ 'ಬಳೆಕೆಂಪ' ಚಿತ್ರ ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ಕಳೆದ ಬಾರಿ 'ತಿಥಿ' ಸಿನಿಮಾ ಕೂಡ ವರ್ಕ್ ಇನ್ ಪ್ರೋಗ್ರೆಸ್ ಲಾಬ್ ಇನ್ ಪ್ರಶಸ್ತಿಯನ್ನ ಪಡೆದುಕೊಂಡಿತ್ತು. ಒಟ್ಟಾರೆ ಚಿತ್ರೀಕರಣ ಹಂತದಲ್ಲೇ ಯಶಸ್ಸು ಪಡೆದುಕೊಂಡಿರುವ 'ಬಳೆಕೆಂಪ' ಚಿತ್ರ ತೆರೆ ಮೇಲೆ ಬಂದಾಗ ಪ್ರೇಕ್ಷಕರನ್ನ ಮೋಡಿ ಮಾಡೋದ್ರಲ್ಲಿ ಅನುಮಾನವಿಲ್ಲ.