Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಂಜನಿಪುತ್ರ' ಸಿನಿಮಾ ಪ್ರದರ್ಶನ ನಿಲ್ಲಿಸುವಂತೆ ಕೋರ್ಟ್ ಆದೇಶ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ಅಂಜನಿಪುತ್ರ' ಚಿತ್ರದ ಪ್ರದರ್ಶನವನ್ನ ನಿಲ್ಲಿಸುವಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯ ಈ ಹಿಂದೆಯೆ ಪ್ರದರ್ಶನ ನಿಲ್ಲಿಸುವಂತೆ ತಡೆಯಾಜ್ಞೆ ನೀಡಿದ್ದರು ಕೂಡ ಚಿತ್ರಮಂದಿರಗಳಲ್ಲಿ ಪ್ರದರ್ಶನ ಮುಂದುವರೆದಿದೆ. ಹೀಗಾಗಿ, ಚಿತ್ರತಂಡದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ವಕೀಲ ಜಿ. ನಾರಾಯಣಸ್ವಾಮಿ ಮತ್ತೊಮ್ಮೆ ದೂರು ದಾಖಲಿಸಿದ್ದರು.
'ಅಂಜನಿಪುತ್ರ' ಚಿತ್ರದಲ್ಲಿ ವಕೀಲರಿಗೆ ಅವಮಾನ ಮಾಡುವ ರೀತಿಯಲ್ಲಿ ಸಂಭಾಷಣೆ ಇದೆ. ಹೀಗಾಗಿ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಸಂಭಾಷಣೆಯನ್ನ ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.
'ಅಂಜನಿಪುತ್ರ'ನಿಗೆ ಎದುರಾದ ವಿಘ್ನ : ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಅರ್ಜ
ಈ ಅರ್ಜಿಯನ್ನ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜನವರಿ 2ನೇ ತಾರೀಖಿನವರೆಗೂ ಚಿತ್ರದ ಪ್ರದರ್ಶನ ರದ್ದು ಮಾಡಿ ಎಂದು ತಡೆಯಾಜ್ಞೆ ನೀಡಿತ್ತು. ಆದ್ರೆ, ಕೋರ್ಟ್ ಆದೇಶ ನಮ್ಮ ಕೈಗೆ ಸಿಕ್ಕಿಲ್ಲ ಎಂಬ ಕಾರಣ ನೀಡಿ ಸಿನಿಮಾ ಪ್ರದರ್ಶನ ಮಾಡಲಾಗುತ್ತಿತ್ತು. ಹೀಗಾಗಿ, ದೂರುದಾರರು ನ್ಯಾಯಾಂಗ ನಿಂದನೆಯಾಗಿದೆ ಎಂದು ಮತ್ತೆ ಅರ್ಜಿ ಸಲ್ಲಿಸಿ ಕೋರ್ಟ್ ಗಮನಕ್ಕೆ ತಂದಿದ್ದರು. ಇದರಿಂದ ನ್ಯಾಯಾಲಯ ಡಿಜಿಐಜಿಗೆ ಪ್ರದರ್ಶನ ನಿಲ್ಲಿಸುವಂತೆ ನೋಟಿಸ್ ನೀಡಿದೆ.
ಕಾರಣವೇನು?
''ನೀನು
ಗಂಟೆ
ಅಲ್ಲಾಡಿಸೋ
ಹಾಗಿದ್ರೆ,
ಕೋರ್ಟ್
ನಲ್ಲಿ
ಅಲ್ಲಾಡ್ಸು.
ಇಲ್ಲಿ
ಅಲ್ಲಾಡಿಸಿದ್ರೆ
ಕಟ್
ಮಾಡಿ
ಬಿಡ್ತೀನಿ"
ಎಂದು
ಇನ್ಸ್
ಪೆಕ್ಟರ್
ರವಿ
ಶಂಕರ್,
ವಕೀಲರಿಗೆ
ಹೇಳುವ
ದೃಶ್ಯ
ಸಿನಿಮಾದಲ್ಲಿದೆ.
ಚಿತ್ರದ
ನಿರ್ದೇಶಕ
ಎ.ಹರ್ಷ,
ನಿರ್ಮಾಪಕ
ಎಂ.ಎನ್.ಕುಮಾರ್,
ಚಲನಚಿತ್ರ
ವಾಣಿಜ್ಯ
ಮಂಡಳಿ
ಹಾಗೂ
ಸೆನ್ಸಾರ್
ಮಂಡಳಿ
ವಿರುದ್ಧ
ಅರ್ಜಿ
ಸಲ್ಲಿಸಿದ್ದರು.