Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂತಾರಾಷ್ಟ್ರೀಯ ಸಿನಿಮಾ ಹಬ್ಬಕ್ಕೆ ಬೆಂಗಳೂರು ಸಜ್ಜು
ಆರನೇ ಅಂತಾರಾಷ್ಟ್ರೀಯ ಚಲನ ಚಿತ್ರೋತವಕ್ಕೆ ಬೆಂಗಳೂರಿನಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಇದೇ ಡಿಸೆಂಬರ್ 26 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಸಂಜೆ 5.30 ಕ್ಕೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇರಾಕ್ ದೇಶದ ಖರ್ಜನ್ ಖಾದರ್ ನಿರ್ದೇಶನದ 'ಬೇಕಾಸ್' ಚಿತ್ರದ ಮೂಲಕ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಖ್ಯಾತ ನಟ ಕಮಲ್ ಹಾಸನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಾರ್ತಾ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಕೆ.ಆರ್.ನಿರಂಜನ್ ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಕನ್ನಡ ಚಿತ್ರೋದ್ಯಮ ಇಅದಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್ ಡಿ ಗಂಗರಾಜು ಈ ಸಂದರ್ಭದಲ್ಲಿ ತಿಳಿಸಿದರು.
ಉದ್ಘಾಟನಾ ದಿನ ಡಿಸೆಂಬರ್ 26 ರಂದು ಚಿತ್ರೋದ್ಯಮಕ್ಕೆ ರಜೆ ಘೋಷಿಸಲಾಗಿದೆ. ಅಂದು ಕನ್ನಡ ಚಿತ್ರ ರಂಗದ ಕಲಾವಿದರು, ತಂತ್ರಜ್ಞರು ಭಾಗಿಯಾಗಲಿದ್ದಾರೆ ಎಂದು ಗಂಗರಾಜು ತಿಳಿಸಿದ್ದಾರೆ.
ವಾರ್ತಾ ಇಲಾಖೆಯ ಕಾರ್ಯದರ್ಶಿ ನಿರಂಜನ್ ಮಾತನಾಡಿ, ಡಿಸೆಂಬರ್ 26 ರಂದು ಪ್ರಾದೇಶಿಕ ಚಿತ್ರಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಚಾರವಾಗಿ ಚರ್ಚೆ ನಡೆಯಲಿದೆ. ಡಿಸೆಂಬರ್ 29 ರಂದು ಡಿಜಿಟಲ್ ಕ್ಯಾಮೆರಾಗಳ ಕುರಿತು ವಿಚಾರಸಂಕಿರಣ ನಡೆಯಲಿದೆ. ಡಿಸೆಂಬರ್ 30 ರಂದು ಶಬ್ಧಗ್ರಹಣ ಕುರಿತು ವಿಚಾರಸಂಕಿರಣ ನಡೆಯಲಿದೆ ಎಂದು ತಿಳಿಸಿದರು.
ಜನವರಿ 2 ರಂದು ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯಪಾಲ ಎಚಾರ್ ಭಾರದ್ವಾಜ್ ಅವರು ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಆಸ್ಟ್ರೇಲಿಯಾದ ನಿರ್ದೇಶಕ ಕಿಮ್ ಮೋರ್ದಂ ಅವರ 'ದಿ ರಾಕೆಟ್' ಚಿತ್ರವನ್ನು ಪ್ರದರ್ಶಿಸಲಾಗುತ್ತದೆ. ಏಕಕಾಲಕ್ಕೆ ಏಳು ಪರದೆಗಳ ಮೇಲೆ ಈ ಚಿತ್ರವನ್ನು ಪ್ರದರ್ಶಿಸಲಾಗುತ್ತದೆ ಎಂದು ಕಲಾತ್ಮಕ ಚಿತ್ರಗಳ ನಿರ್ದೇಶಕ ಎಚ್ ಎನ್ ನರಹರಿ ರಾವ್ ತಿಳಿಸಿದರು. (ಏಜೆನ್ಸೀಸ್)