Don't Miss!
- News Lok Sabha Election: ಗೂಗಲ್ನಲ್ಲೂ ಪ್ರಜಾಪ್ರಭುತ್ವದ ಹಬ್ಬದ ಸಂಭ್ರಮ
- Automobiles Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್, ಸುಂದರ್ ಗೌಡಗಾಗಿ ತೀವ್ರ ಹುಡುಕಾಟ
Recommended Video
ಸುಂದರ್ ಪಿ ಗೌಡ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದಡಿಯಲ್ಲಿ ನಟ ದುನಿಯಾ ವಿಜಯ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ದುನಿಯಾ ವಿಜಯ್ ಮೊಬೈಲ್ ಸ್ವೀಚ್ ಆಫ್ ಆಗಿರುವ ಕಾರಣ ಅವರ ಮೊಬೈಲ್ ನೆಟ್ವರ್ಕ್ ಆಧರಿಸಿ ದುನಿಯಾ ವಿಜಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
'ಮಾಸ್ತಿಗುಡಿ' ಪ್ರಕರಣದಲ್ಲಿ ಆರೋಪಿ ಆಗಿರುವ ಸುಂದರ್ ಪಿ ಗೌಡ ಅವರೊಂದಿಗೆ ದುನಿಯಾ ವಿಜಿ ಕೂಡ ಇದ್ದಾರೆ ಎನ್ನುವ ಮಾಹಿತಿ ಪಡೆದುಕೊಂಡಿರುವ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಇಬ್ಬರ ಬಂಧನಕ್ಕಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.
ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಮೇಲೆ ಎಫ್.ಐ.ಆರ್ ದಾಖಲು.!
ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆ ದುನಿಯಾ ವಿಜಯ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಸಿ ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿದ್ದು ನೆನ್ನೆಯಿಂದ ನಟ ದುನಿಯಾ ವಿಜಿ ಹುಡುಕಾಟ ಆರಂಭಿಸಿದ್ದಾರೆ. ವಿಜಯ್ ಅವರ ಕುಟುಂಬಸ್ಥರನ್ನು ವಿಚಾರಿಸಿದ್ರೆ, ಮನೆಯಲ್ಲಿ ಇಲ್ಲ ಹೊರಗಡೆ ಹೋಗಿದ್ದಾರೆ ಎಂದು ಪೊಲೀಸರಿಗೆ ಉಡಾಫೆ ಉತ್ತರ ನೀಡುತ್ತಿದ್ದಾರಂತೆ.
ಮಾಸ್ತಿಗುಡಿ ಸಿನಿಮಾ ಸಾಹಸ ದೃಶ್ಯ ಚಿತ್ರೀಕರಣ ವೇಳೆ ಸಾವನ್ನಪ್ಪಿದ ಖಳನಟರಾದ ಅನಿಲ್ ಮತ್ತು ಉದಯ್ ಪ್ರಕರಣದ ಆರೋಪಿ ಸುಂದರ್ ಪಿ ಗೌಡ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆ ಆರೋಪಿ ಬಂಧಿಸಲು ತಾವರೆಕೆರೆ ಪೊಲೀಸರು ಬಂದಿದ್ದರು .ಈ ವೇಳೆ ಆರೋಪಿ ಎಸ್ಕೇಪ್ ಆಗಲು ದುನಿಯಾ ವಿಜಯ್ ಸಹಾಯ ಮಾಡಿದ್ದ ಆರೋಪ ಹಾಗೂ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ ಮಾಡಿದ್ದ ಆರೋಪವನ್ನು ದುನಿಯಾ ವಿಜಿ ಎದುರಿಸುತ್ತಿದ್ದಾರೆ.