Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್, ಸುಂದರ್ ಗೌಡಗಾಗಿ ತೀವ್ರ ಹುಡುಕಾಟ
Recommended Video
ಸುಂದರ್ ಪಿ ಗೌಡ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದಡಿಯಲ್ಲಿ ನಟ ದುನಿಯಾ ವಿಜಯ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ದುನಿಯಾ ವಿಜಯ್ ಮೊಬೈಲ್ ಸ್ವೀಚ್ ಆಫ್ ಆಗಿರುವ ಕಾರಣ ಅವರ ಮೊಬೈಲ್ ನೆಟ್ವರ್ಕ್ ಆಧರಿಸಿ ದುನಿಯಾ ವಿಜಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
'ಮಾಸ್ತಿಗುಡಿ' ಪ್ರಕರಣದಲ್ಲಿ ಆರೋಪಿ ಆಗಿರುವ ಸುಂದರ್ ಪಿ ಗೌಡ ಅವರೊಂದಿಗೆ ದುನಿಯಾ ವಿಜಿ ಕೂಡ ಇದ್ದಾರೆ ಎನ್ನುವ ಮಾಹಿತಿ ಪಡೆದುಕೊಂಡಿರುವ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಇಬ್ಬರ ಬಂಧನಕ್ಕಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.
ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಮೇಲೆ ಎಫ್.ಐ.ಆರ್ ದಾಖಲು.!
ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆ ದುನಿಯಾ ವಿಜಯ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಸಿ ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿದ್ದು ನೆನ್ನೆಯಿಂದ ನಟ ದುನಿಯಾ ವಿಜಿ ಹುಡುಕಾಟ ಆರಂಭಿಸಿದ್ದಾರೆ. ವಿಜಯ್ ಅವರ ಕುಟುಂಬಸ್ಥರನ್ನು ವಿಚಾರಿಸಿದ್ರೆ, ಮನೆಯಲ್ಲಿ ಇಲ್ಲ ಹೊರಗಡೆ ಹೋಗಿದ್ದಾರೆ ಎಂದು ಪೊಲೀಸರಿಗೆ ಉಡಾಫೆ ಉತ್ತರ ನೀಡುತ್ತಿದ್ದಾರಂತೆ.
ಮಾಸ್ತಿಗುಡಿ ಸಿನಿಮಾ ಸಾಹಸ ದೃಶ್ಯ ಚಿತ್ರೀಕರಣ ವೇಳೆ ಸಾವನ್ನಪ್ಪಿದ ಖಳನಟರಾದ ಅನಿಲ್ ಮತ್ತು ಉದಯ್ ಪ್ರಕರಣದ ಆರೋಪಿ ಸುಂದರ್ ಪಿ ಗೌಡ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆ ಆರೋಪಿ ಬಂಧಿಸಲು ತಾವರೆಕೆರೆ ಪೊಲೀಸರು ಬಂದಿದ್ದರು .ಈ ವೇಳೆ ಆರೋಪಿ ಎಸ್ಕೇಪ್ ಆಗಲು ದುನಿಯಾ ವಿಜಯ್ ಸಹಾಯ ಮಾಡಿದ್ದ ಆರೋಪ ಹಾಗೂ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ ಮಾಡಿದ್ದ ಆರೋಪವನ್ನು ದುನಿಯಾ ವಿಜಿ ಎದುರಿಸುತ್ತಿದ್ದಾರೆ.