Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರಗೂರು ರಾಮಚಂದ್ರಪ್ಪ ಪ್ರಶಸ್ತಿ ನಿರಾಕರಿಸಿದ್ದೇಕೆ?
ಸಾಮಾನ್ಯವಾಗಿ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾದಾಗ ಪ್ರತಿ ಬಾರಿಯೂ ಒಂದಿಲ್ಲೊಂದು ಸಮಸ್ಯೆಗಳು, ವಿವಾದಗಳು ತಪ್ಪಿದ್ದಲ್ಲ. ಕೆಲವರು ತಮಗೆ ಪ್ರಶಸ್ತಿ ಸಿಗಲಿಲ್ಲ ಎಂದು ಕ್ಯಾತೆ ತೆಗೆದರೆ, ಇನ್ನೂ ಕೆಲವರು ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸುವುದು ಸಾಮಾನ್ಯ.
ಆದರೆ ಪ್ರಶಸ್ತಿ ನಿರಾಕರಿಸುವಂತಹ ಸಾಹಸಕ್ಕೆ ಯಾರೂ ಕೈಹಾಕುತ್ತಿರಲಿಲ್ಲ. ಈ ರೀತಿಯ ಬೆಳವಣಿಗೆಗಳು ಅಪರೂಪ ಎಂಬಂತಿದ್ದವು. ಇದೀಗ ಡಾ.ಬರಗೂರು ರಾಮಚಂದ್ರಪ್ಪನವರು ತಮ್ಮ 'ಅಂಗುಲಿಮಾಲ' ಚಿತ್ರಕ್ಕೆ ಒಲಿದಿದ್ದ ಶ್ರೇಷ್ಠ ಕಥೆ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. [ರಾಜ್ಯ ಪ್ರಶಸ್ತಿ: ಶ್ರೇಷ್ಠ ನಟ ದರ್ಶನ್, ನಟಿ ನಿರ್ಮಲಾ]
ಪುರಾಣದ ಕಥೆಗೆ ತಮ್ಮದೇ ಆದಂತಹ ಪುನರ್ ವ್ಯಾಖ್ಯಾನ ನೀಡಿದ್ದೇವೆ. ವಿವಿಧ ಆಕರಗಳಿಗೆ ಸಂಬಂಧಿಸಿದ ಕಥೆಗೆ ನಾನು ಪ್ರಶಸ್ತಿ ಪಡೆಯುವುದು ನೈತಿಕವಾಗಿ ಸರಿಯಲ್ಲ. ಹಾಗಾಗಿ ನಿರಾಕರಿಸಿದ್ದೇನೆ ಎಂದು ಹೇಳಿದ್ದಾರೆ.
ಕಥಾ ವಿಭಾಗದಲ್ಲಿ ಪ್ರಶಸ್ತಿಗೆ ತಮ್ಮನ್ನು ಪರಿಗಣಿಸಿದ್ದಕ್ಕೆ ಕೃತಜ್ಞತೆಗಳನ್ನು ತಿಳಿಸಿರುವ ಅವರು ಅಷ್ಟೇ ವಿನಯಪೂರ್ವಕವಾಗಿ ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ. ಅಂದಹಾಗೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿಯು ಇಪ್ಪತ್ತು ಸಾವಿರ ರುಪಾಯಿಗಳ ನಗದು ಮತ್ತು ಬೆಳ್ಳಿಯ ಪದಕವನ್ನು ಒಳಗೊಂಡಿದೆ.