ಕನ್ನಡ ಚಿತ್ರರಂಗದ ಬೆಳ್ಳಿತೆರೆ ಮೇಲೆ ಬಸವೇಶ್ವರರು

By ಶಶಿಧರ ಚಿತ್ರದುರ್ಗ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ.
-------------
ಆಡು ಭಾಷೆಯ ಶರಣ ಸಾಹಿತ್ಯದೊಂದಿಗೆ ಸಾಮಾನ್ಯರ ಬದುಕಿಗೆ ಬೆಳಕಾದ ಬಸವೇಶ್ವರರು ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ. ಕನ್ನಡ ಬೆಳ್ಳಿತೆರೆ ಮೇಲೆ ಬಸವೇಶ್ವರರ ಜೀವನ, ಕಾಯಕದ ಕುರಿತಾಗಿ ಪ್ರಸ್ತಾಪವಾಗಿದೆ. ಶಿವಶರಣರ ಬದುಕು-ಸಾಧನೆ ಆಧರಿಸಿದ ಚಿತ್ರಗಳಲ್ಲಿಯೂ ಬಸವೇಶ್ವರರು ಬಂದು ಹೋಗುತ್ತಾರೆ. ಬಸವೇಶ್ವರರು ಮತ್ತು ಶಿವಶರಣರು ರಚಿಸಿರುವ ವಚನಗಳನ್ನು ಕೆಲವು ಸಿನಿಮಾಗಳಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ.

ಕನ್ನಡ ಬೆಳ್ಳಿತೆರೆಯಲ್ಲಿ ಬಸವೇಶ್ವರರ ಪಾತ್ರದಲ್ಲಿ ಅತ್ಯಂತ ಜನಪ್ರಿಯವಾದ ನಟ ಹೊನ್ನಪ್ಪ ಭಾಗವತರ್. ಈ ಪಾತ್ರದ ಬಗ್ಗೆ ಪ್ರಸ್ತಾಪವಾಗುತ್ತಿದ್ದಂತೆ ಹೊನ್ನಪ್ಪನವರ ಸಾತ್ವಿಕ ಮುಖ ಕಣ್ಣೆದುರು ಬರುತ್ತದೆ.

ಐವತ್ತರ ದಶಕದ ಕೊನೆಯಲ್ಲಿ ತೆರೆಕಂಡ 'ಜಗಜ್ಯೋತಿ ಬಸವೇಶ್ವರ' (1959) ಚಿತ್ರದಲ್ಲಿ ಹೊನ್ನಪ್ಪನವರು ಬಸವೇಶ್ವರರ ಪಾತ್ರಕ್ಕೆ ಸೂಕ್ತವಾಗಿ ಹೊಂದಿಕೆಯಾಗಿದ್ದರು. ಡಾ.ರಾಜಕುಮಾರ್ ಬಿಜ್ಜಳನ ಪಾತ್ರದಲ್ಲಿ ಅಭಿನಯಿಸಿದ್ದ ಚಿತ್ರವನ್ನು ಟಿ.ವಿ.ಸಿಂಗ್‍ಠಾಕೂರ್ ನಿರ್ದೇಶಿಸಿದ್ದರು. ಅತ್ಯುತ್ತಮ ಪ್ರಾದೇಶಿಕ ಸಿನಿಮಾ ರಾಷ್ಟ್ರಪ್ರಶಸ್ತಿಗೆ ಜಗಜ್ಯೋತಿ ಬಸವೇಶ್ವರ' ಪಾತ್ರವಾಗಿತ್ತು.

ಮುಂದೆ 1983ರಲ್ಲಿ ತೆರೆಕಂಡ 'ಕ್ರಾಂತಿಯೋಗಿ ಬಸವಣ್ಣ' ಚಿತ್ರದಲ್ಲಿ ಬಸವಣ್ಣನವರ ಕಲ್ಯಾಣ ಕ್ರಾಂತಿಯೊಂದಿಗೆ ಪ್ರಮುಖ ಶಿವಶರಣರೆಲ್ಲರ ಪ್ರಸ್ತಾಪವಿತ್ತು. ದೊಡ್ಡ ತಾರಾಬಳಗವಿದ್ದ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ಕಲಾವಿದರನೇಕರು ನಟಿಸಿದ್ದರು. ಶೀರ್ಷಿಕೆ ಪಾತ್ರದಲ್ಲಿ ಡಾ.ರಾಜಕುಮಾರ್ ಅಭಿನಯಿಸುತ್ತಾರೆ ಎನ್ನಲಾಗಿತ್ತು.

ಬಸವೇಶ್ವರರ ಪಾತ್ರಧಾರಿಯಾಗಿ ಅಶೋಕ್

ಬಸವೇಶ್ವರರ ಪಾತ್ರಧಾರಿಯಾಗಿ ಅಶೋಕ್

ಕ್ರಾಂತಿಯೋಗಿ ಬಸವಣ್ಣ ಚಿತ್ರಕ್ಕೆ ಕೊನೆಯ ಹಂತದಲ್ಲಿ ಬಸವೇಶ್ವರರ ಪಾತ್ರಧಾರಿಯಾಗಿ ಅಶೋಕ್ ತೆರೆ ಮೇಲೆ ಬಂದರು. ಬಿಜ್ಜಳ ರಾಜನಾಗಿ ಶ್ರೀನಿವಾಸಮೂರ್ತಿ ಅಭಿನಯಿಸಿದ್ದ ಚಿತ್ರದಲ್ಲಿ ವಚನಗಳು ಸೊಗಸಾಗಿ ಬಳಕೆಯಾಗಿದ್ದವು. ಕೆ.ಎಸ್.ಎಲ್.ಸ್ವಾಮಿ ನಿರ್ದೇಶನದಲ್ಲಿ ತೆರೆಕಂಡ ಚಿತ್ರಕ್ಕೆ ಬಾಕ್ಸ್ ಆಫೀಸ್‍ನಲ್ಲಿ ನಿರೀಕ್ಷಿಸಿದ ಫಲಿತಾಂಶ ವ್ಯಕ್ತವಾಗಲಿಲ್ಲ. ಆದರೆ ಬಸವೇಶ್ವರರ ಕುರಿತಾಗಿ ಅತ್ಯುತ್ತಮ ಸಾಕ್ಷ್ಯಚಿತ್ರವಾಗಿಯೂ ಇದು ದಾಖಲಾಯ್ತು.

`ದಾನಮ್ಮದೇವಿ' ಚಿತ್ರದಲ್ಲಿ ಬಸವಣ್ಣ

`ದಾನಮ್ಮದೇವಿ' ಚಿತ್ರದಲ್ಲಿ ಬಸವಣ್ಣ

ಇನ್ನು ಶಿವಶರಣ, ಶರಣೆಯರಾದ ದಾನಮ್ಮದೇವಿ, ಮಡಿವಾಳ ಮಾಚಿದೇವ, ಹರಳಯ್ಯನವರ ಸಿನಿಮಾಗಳಲ್ಲಿಯೂ ಪ್ರಾಸಂಗಿಕವಾಗಿ ಬಸವೇಶ್ವರರ ಪಾತ್ರಗಳಿದ್ದವು. ಚಿಂದೋಡಿ ಬಂಗಾರೇಶ್ ನಿರ್ದೇಶನದಲ್ಲಿ ತೆರೆಕಂಡ `ದಾನಮ್ಮದೇವಿ' ಚಿತ್ರದಲ್ಲಿ ನಟ ರಾಮಕೃಷ್ಣ ನಿಭಾಯಿಸಿದ್ದ ಬಸವೇಶ್ವರರ ಪಾತ್ರ ಮೆಚ್ಚುಗೆಗೆ ಪಾತ್ರವಾಗಿತ್ತು. ಹಂಸಲೇಖ ಸಾಹಿತ್ಯ, ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿದ್ದ `ದಾನಮ್ಮ ದೇವಿ' ಗೀತೆಗಳು ಈ ಹೊತ್ತಿಗೂ ಅಚ್ಚಹಸಿರಾಗಿವೆ.

ಚಿತ್ರದಲ್ಲಿ: ಹೊನ್ನಪ್ಪ ಭಾಗವತರ್

`ಅಲ್ಲಮ' ಸಿನಿಮಾದಲ್ಲಿ ಬಸವೇಶ್ವರರ ಚಿತ್ರಣ

`ಅಲ್ಲಮ' ಸಿನಿಮಾದಲ್ಲಿ ಬಸವೇಶ್ವರರ ಚಿತ್ರಣ

ಟಿ.ಎಸ್.ನಾಗಾಭರಣ ನಿರ್ದೇಶನದಲ್ಲಿ ತೆರೆಗೆ ಬಂದ `ಅಲ್ಲಮ' ಸಿನಿಮಾದಲ್ಲಿ ಬಸವೇಶ್ವರರ ಚಿತ್ರಣದ ಮತ್ತೊಂದು ಆಯಾಮವಿದೆ. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಈ ಚಿತ್ರದಲ್ಲಿ ಬಸವೇಶ್ವರರ ಪಾತ್ರ ನಿರ್ವಹಿಸಿದ್ದಾರೆ. `ಅನುಭವ ಮಂಟದಲ್ಲಿ ಅಲ್ಲಮರೊಂದಿಗೆ ಮುಖಾಮುಖಿಯಾಗುವ ಚಿಕ್ಕ ವಯಸ್ಸಿನ ಬಸವೇಶ್ವರರ ಪಾತ್ರವಿದು. ಚಿಕ್ಕಂದಿನಲ್ಲಿ ನಾನು ನನ್ನ ತಂದೆಯನ್ನು ನಾಟಕವೊಂದರಲ್ಲಿ ಬಸವಣ್ಣನ ಪಾತ್ರದಲ್ಲಿ ನೋಡಿದ್ದೆ. ಆಗಿನಿಂದಲೂ ಈ ಪಾತ್ರದಲ್ಲಿ ನಾನು ನಟಿಸಬೇಕೆಂದು ಆಸೆ ಪಟ್ಟಿದ್ದೆ. ನಾಗಾಭರಣರ ಸಿನಿಮಾ ಮೂಲಕ ಆಸೆ ಕೈಗೂಡಿತು' ಎನ್ನುತ್ತಾರೆ ವಿಜಯ್.

`ಕ್ರಾಂತಿಯೋಗಿ ಬಸವಣ್ಣ' ಧಾರಾವಾಹಿ

`ಕ್ರಾಂತಿಯೋಗಿ ಬಸವಣ್ಣ' ಧಾರಾವಾಹಿ

ಕನ್ನಡ ಸಿನಿಮಾ ಕಂಡ ಪ್ರತಿಭಾವಂತ ಕಲಾವಿದ ಶ್ರೀನಿವಾಸಮೂರ್ತಿ ಕಿರುತೆರೆಗಾಗಿ `ಕ್ರಾಂತಿಯೋಗಿ ಬಸವಣ್ಣ' ಧಾರಾವಾಹಿ ನಿರ್ದೇಶಿಸಿ, ಶೀರ್ಷಿಕೆ ಪಾತ್ರಕ್ಕೆ ಜೀವ ತುಂಬಿದ್ದರು. ಒಂದೂವರೆ ದಶಕದ ಹಿಂದೆ ಖಾಸಗಿ ವಾಹಿನಿಯೊಂದರಲ್ಲಿ ಪ್ರತೀ ವಾರ ಎರಡು ವರ್ಷಗಳ ಕಾಲ ಧಾರಾವಾಹಿ ಪ್ರಸಾರವಾಗಿತ್ತು.

'ಬಸವೇಶ್ವರರ ಪಾತ್ರದಲ್ಲಿ ಅಭಿನಯಿಸಬೇಕೆಂದು ರಂಗಭೂಮಿಯ ಆರಂಭದ ದಿನಗಳಲ್ಲೇ ಆಶಿಸಿದ್ದೆ. ಕಾರಣಾಂತರಗಳಿಂದ ಬೆಳ್ಳಿತೆರೆಯಲ್ಲಿ ನನಗೆ ಈ ಪಾತ್ರ ನಿರ್ವಹಿಸಲು ಸಾಧ್ಯವಾಗಲಿಲ್ಲ. ಮುಂದೆ ಕಿರುತೆರೆಗಾಗಿ ಸರಣಿ ಮಾಡಿದೆ. ದೊಡ್ಡ ಮಟ್ಟದಲ್ಲೇ ತಯಾರಾದ ಸರಣಿಯೊಂದಿಗೆ ಬಹಳಷ್ಟು ಕಲಾವಿದರು ಕಿರುತೆರೆಯಲ್ಲಿ ನೆಲೆ ಕಂಡುಕೊಂಡರು. ಇಂಥದ್ದೊಂದು ಮಹತ್ವದ ಸರಣಿ ಮಾಡಿದ ಸಾರ್ಥಕತೆ ನನ್ನದಾಯ್ತು' ಎನ್ನುತ್ತಾರೆ ಶ್ರೀನಿವಾಸಮೂರ್ತಿ.

More from Filmibeat

English summary
Starting from Kranthiyogi Baasavanna film many played Basavanna Character in Kannada films, On th eve of Basava Jayanti here is a special article on the character.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X