Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಜೆಪಿ ಗೆಲುವಿಗೆ ಬಹುಪರಾಕ್ ಎಂದ ಸೆಲೆಬ್ರಿಟಿಗಳು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಆಗಸ್ಟ್ 22 ರಂದು ನಡೆದಿದ್ದು, ಇಂದು (ಆಗಸ್ಟ್ 25) ಚುನಾವಣಾ ಫಲಿತಾಂಶ ಪ್ರಕಟಣೆಗೊಂಡಿದೆ.
ಬೆಂಗಳೂರಿನಲ್ಲಿ ಮತ್ತೆ ಬಿಜೆಪಿ ಅಧಿಕಾರ ಸ್ಥಾಪಿಸುವ ಹಂತಕ್ಕೆ ಬಂದಿರುವುದಕ್ಕೆ ಸ್ಯಾಂಡಲ್ ವುಡ್ ನ ತಾರೆಯರು ಟ್ವೀಟ್ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.[ಬಿಜೆಪಿಗೆ ಸ್ಪಷ್ಟ ಬಹುಮತ, ಕಾಂಗ್ರೆಸ್ಸಿಗೆ ಮುಖಭಂಗ]
ಸ್ಯಾಂಡಲ್ ವುಡ್ ನ ಖ್ಯಾತ ನಟಿ ಕಮ್ ನಿರ್ಮಾಪಕಿ ವಿಜಯಲಕ್ಷ್ಮಿ ಸಿಂಗ್ ಅವರು ಬಿಜೆಪಿ ಪರವಾಗಿ ಕಾವೇರಿ ಪುರ ವಾರ್ಡ್ ನಲ್ಲಿ ಸ್ಪರ್ಧಿಸಿದ್ದು, 2 ಸಾವಿರ ಮತಗಳ ಅಂತರದಲ್ಲಿ ಮೂರನೇ ಸ್ಥಾನಕ್ಕೆ ಕುಸಿದು ಸೋಲನ್ನು ಅನುಭವಿಸಿದರೂ ಕೂಡ ಎಲ್ಲೆಡೆ ಬಿಜೆಪಿ ಅಗ್ರಸ್ಥಾನದಲ್ಲಿದೆ.
ಈ ಬಗ್ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳಾದ ಜಗ್ಗೇಶ್, ಮಾಳವಿಕ ಅವಿನಾಶ್ ಹಾಗೂ ಶಿಲ್ಪಾ ಗಣೇಶ್ ಮುಂತಾದವರು ತಮ್ಮ ತಮ್ಮ ಟ್ವಿಟ್ಟರ್ ಮೂಲಕ ಬಿಜೆಪಿ ಜಯಭೇರಿ ಬಾರಿಸಿದ್ದಕ್ಕಾಗಿ ಶುಭಾಶಯ ಕೋರಿದ್ದಾರೆ.
ನವರಸ ನಾಯಕ ಜಗ್ಗೇಶ್ ಅವರು ಬಿಜೆಪಿ ಗದ್ದುಗೆ ಹಿಡಿದ ಸಂಭ್ರಮದಲ್ಲಿ ಮೋದಿಯವರು ಮಾಡಿದ ಟ್ವೀಟ್ ಗೆ ತಿರುಗಿ ಟ್ವೀಟ್ ಮಾಡುವ ಮೂಲಕ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಮುಂದೆ ಓದಿ...
ನವರಸ ನಾಯಕ ಜಗ್ಗೇಶ್
ಮೋದಿ ಅವರ ಸರಳ ನಡೆಯನ್ನು ನವರಸ ನಾಯಕ ಜಗ್ಗೇಶ್ ಅವರು ತುಂಬು ಮನಸ್ಸಿನಿಂದ ಮೋದಿ ಭಾರತೀಯರ ಹೆಮ್ಮೆಯ ಮಗ ಎಂದು ಟ್ವೀಟ್ ಮೂಲಕ ಅಭಿಮಾನ ವ್ಯಕ್ತಪಡಿಸಿದ್ದಾರೆ.
|
ಸ್ಯಾಂಡಲ್ ವುಡ್ ನಟಿ ಮಾಳವಿಕ ಅವಿನಾಶ್
ಈಗಾಗಲೇ ಬೆಂಗಳೂರು ಬಿಜೆಪಿ ಪಕ್ಷ ಅನ್ನೋದನ್ನ ನಿರ್ಧರಿಸಿದೆ, ಜೊತೆಗೆ ಕಾಂಗ್ರೆಸ್ ಸೋತು ನೆಲಕಚ್ಚಿದೆ ಎಂದು ಸ್ಯಾಂಡಲ್ ವುಡ್ ನಟಿ ಮಾಳವಿಕ ಅವಿನಾಶ್ ಟ್ವೀಟ್ ಮಾಡಿ ಬಿಜೆಪಿ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ.
|
ಸ್ಯಾಂಡಲ್ ವುಡ್ ಸ್ಟಾರ್ ಜಗ್ಗೇಶ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೋದಿ ನಾಯಕತ್ವದ ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲು ಸಹಕರಿಸಿದ ಬೆಂಗಳೂರಿನ ಮತದಾರರಿಗೆ ಕನ್ನಡ ನಟ ಜಗ್ಗೇಶ್ ಅವರು ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
|
ನಿರ್ಮಾಪಕಿ ಶಿಲ್ಪಾ ಗಣೇಶ್
ಕನ್ನಡ ನಟ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಅವರು ಬೆಂಗಳೂರು ಬಿಬಿಎಂಪಿ ಗೆ 100 ಜನ ಬಿಜೆಪಿಗರನ್ನು ತಂದುಕೊಟ್ಟ ಮತದಾರರು ಅಂತ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
|
ನಟ ಜಗ್ಗೇಶ್
ಮೋದಿಯವರ ನಡೆ ಅಂದರೆ ಇದೆ.ಸಹಾಯ ಮಾಡಿದ ಮಂದಿಗೆ ಧನ್ಯವಾದ ಹೇಳೊ ಮನುಷ್ಯನ ಹೃದಯ ನಿಷ್ಕಲ್ಮಷವಾಗಿ ಇರುತ್ತದೆ.ಮೋದಿ ಭಾರತೀಯರ ಹೆಮ್ಮೆಯ ಮಗ, ಎಂದು ಟ್ವೀಟ್ ಮಾಡಿದ್ದಾರೆ.