Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರಾಫಿಕ್ ನಿಯಮದ ವಿರುದ್ಧ ಸಿಎಂಗೆ ಸೋನು ಗೌಡ ಸವಾಲ್
Recommended Video
ಕೇಂದ್ರ ಸರ್ಕಾರದ ಹೊಸ ಟ್ರಾಫಿಕ್ ನಿಯಮ ಜನಸಾಮಾನ್ಯರಿಗೆ ದೊಡ್ಡ ತಲೆನೋವಾಗಿದೆ. ಹೆಚ್ಚು ದಂಡ ವಸೂಲಿ ಮಾಡುತ್ತಿರುವ ಸರ್ಕಾರದ ವಿರುದ್ಧ ಜನಸಾಮಾನ್ಯರು ಅಸಮಾದಾನ ಹೊರಹಾಕುತ್ತಿದ್ದಾರೆ. ಟ್ರಾಫಿಕ್ ನಿಯಮ ಬ್ರೇಕ್ ಮಾಡಿದ್ರೆ ಸಾವಿರ ರೂಪಾಯಿಗಳು ದಂಡ ತೆರಬೇಕಾಗುತ್ತೆ.
ಹೊಸ ಟ್ರಾಫಿಕ್ ನಿಯಮದ ಬಗ್ಗೆ ನಟಿ ಸೋನು ಗೌಡ ರೊಚ್ಚಿಗೆದಿದ್ದಾರೆ. ಮೊದಲು ರಸ್ತೆಗಳನ್ನು ಸರಿ ಮಾಡಿಸಿ ನಂತರ ಹೆಚ್ಚು ಹೆಚ್ಚು ಹಣ ವಸೂಲಿ ಮಾಡುವಿರಂತೆ ಎಂದು ಕರ್ನಾಟಕ ಸಿಎಂ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿತ್ರಗಳು : ಬೆಂಗಳೂರಿನ ರಸ್ತೆಗುಂಡಿಯಲ್ಲಿ ಮತ್ಸ್ಯಕನ್ಯೆ ಪ್ರತ್ಯಕ್ಷ!
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸೋನು ಗೌಡ " ಹೆಚ್ಚು ಹೆಚ್ಚು ದಂಡ ವಸೂಲಿ ಮಾಡುವ ಮೊದಲು ಹಾಳಾಗಿರುವ ರಸ್ತೆಯಗಳನ್ನು ಸರಿಪಡಿಸುವ ಬಗ್ಗೆ ಖಚಿತ ಮಾಡಿ ಮುಖ್ಯಮಂತ್ರಿಗಳೆ. ಜನ ಸಾಮಾನ್ಯರು ಕಷ್ಟಪಟ್ಟು ದುಡಿದ ಹಣವಿದು. ದಯವಿಟ್ಟು ಅವರ ಜೀವನವನ್ನು ಹೀಗೆ ಹಾಳು ಮಾಡಬೇಡಿ" ಎಂದು ಮನವಿ ಮಾಡಿಕೊಳ್ಳುವ ಜೊತೆಗೆ ಗುಂಡಿ ಬಿದ್ದಿರುವ ರಸ್ತೆಯಲ್ಲಿ ದ್ವಿಚಕ್ರವಾಹನ ಸವಾರರು ಬಿದ್ದಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.
ಈ ಹಿಂದೆ ಕೂಡ ನಟಿ ಸೋನು ಗೌಡ ಮತ್ಸ್ಯ ಕನ್ಯೆ ವೇಷ ತೊಟ್ಟು ಬಿಬಿಎಂಪಿ ವಿರುದ್ಧ ಪ್ರತಿಭಟನೆ ಮಾಡಿ ಜನರ ಗಮನ ಸೆಳೆದಿದ್ದರು. ಬಾದಲ್ ನಂಜುಂಡ ಸ್ವಾಮಿ ಹಲವು ವರ್ಷಗಳಿಂದ ರಸ್ತೆ ಗುಂಡಿಗಳ ಸುತ್ತ ಕಲಾತ್ಮಕ ಚಿತ್ರಗಳನ್ನು ಬಿಡಿಸಿ ವಿಭಿನ್ನವಾಗಿ ಪ್ರತಿಭಟನೆ ಮಾಡುವ ಮೂಲಕ ಪಾಲಿಕೆ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಗೆ ಸೋನು ಗೌಡ ಕೂಡ ಸಾಥ್ ನೀಡಿದ್ದರು. ಈಗ ಹೊಸ ಟ್ರಾಫಿಕ್ ನಿಯಮದ ಬಗ್ಗೆ ಅಸಮಾದಾನ ವ್ಯಕ್ತಪಡಿಸಿದ್ದಾರೆ.