Just In
Don't Miss!
- Education
DFCCIL Recruitment 2021: 1099 ಜ್ಯೂನಿಯರ್ ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- News
ಕೆಜಿಎಫ್ನಲ್ಲಿ ಮಹದೇವಪುರ ಸಬ್ ಇನ್ಸ್ಪೆಕ್ಟರ್ಗೆ ಚಾಕು ಇರಿತ
- Sports
ಭಾರತ vs ಇಂಗ್ಲೆಂಡ್: ಧೋನಿ ದಾಖಲೆ ಸರಿದೂಗಿಸಿದ ವಿರಾಟ್ ಕೊಹ್ಲಿ
- Lifestyle
ಈ 7 ಬಗೆಯ ಆಹಾರಗಳು ಕೂದಲು ಉದುರುವ ಸಮಸ್ಯೆ ಹೆಚ್ಚಿಸುವುದು
- Automobiles
ಬಿಡುಗಡೆಯ ನಂತರ ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
- Finance
ಚಿನ್ನದ ಬೆಲೆ ಇಳಿಕೆ: ಗರಿಷ್ಠ ಮಟ್ಟಕ್ಕಿಂತ 11,500 ರೂ. ಕಡಿಮೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರೈತರನ್ನು ಭಯೋತ್ಪಾದಕರೆಂದ ಕಂಗನಾ ವಿರುದ್ಧ ಬೆಳಗಾವಿಯಲ್ಲಿ ದೂರು
ಹಿಡಿತವಿಲ್ಲದ ಟ್ವೀಟ್ಗಳಿಂದಾಗಿ ಪದೇ-ಪದೇ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ನಟಿ ಕಂಗನಾ ರಣೌತ್. ಆದರೂ ಅವರಿಗೆ ಬುದ್ಧಿ ಬಂದಂತಿಲ್ಲ. ಈ ಹಿಂದೆ ರೈತ ಮಹಿಳೆಯ ಬಗ್ಗೆ ಬಹು ಕೀಳಾಗಿ ಟ್ವೀಟ್ ಮಾಡಿ ಕೆಂಗಣ್ಣಿಗೆ ಗುರಿಯಾಗಿದ್ದ ಕಂಗನಾ ಈಗ ಮತ್ತೊಮ್ಮೆ ರೈತರನ್ನು ಭಯೋತ್ಪಾದಕರು ಎಂದಿದ್ದಾರೆ.
ರೈತ ಪ್ರತಿಭಟನೆಗೆ ಬೆಂಬಲ ನೀಡಿ ಅಂತರಾಷ್ಟ್ರೀಯ ಪಾಪ್ ತಾರೆ ರಿಹಾನ್ನ ಮಾಡಿದ್ದ ಟ್ವೀಟ್ಗೆ ಪ್ರತಿಟ್ವೀಟ್ ಮಾಡಿದ್ದ ನಟಿ ಕಂಗನಾ ರಣೌತ್, 'ಅಲ್ಲಿ ಪ್ರತಿಭಟಿಸುತ್ತಿರುವವರು ರೈತರಲ್ಲ, ಭಯೋತ್ಪಾದಕರು' ಎಂದಿದ್ದರು. ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ ಕಂಗನಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹಲವು ಕಡೆ ದೂರುಗಳು ಸಹ ದಾಖಲಾಗಿದ್ದವು. ಇದೀಗ ರಾಜ್ಯದ ಬೆಳಗಾವಿಯಲ್ಲಿ ಸಹ ಕಂಗನಾ ವಿರುದ್ಧ ದೂರು ದಾಖಲಾಗಿದೆ.
ಬೆಳಗಾವಿಯ ನ್ಯಾಯವಾದಿ ಹರ್ಷವರ್ಧನ ಪಾಟೀಲ್ ಅವರು ನಟಿ ಕಂಗನಾ ರಣೌತ್ ವಿರುದ್ಧ ಟಿಳಕವಾಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಕಂಗನಾ ವಿರುದ್ಧ ದೂರು ದಾಖಲಿಸಿಕೊಳ್ಳಲು ಕಾಲಾವಕಾಶ ಕೋರಿದ್ದಾರೆ ಪೊಲೀಸರು.
ಐಪಿಸಿ ಸೆಕ್ಷನ್ 153, 153(A) 503, 504, 505 (1), 505 (B), 505 (c), 505(2), 506 ಅಡಿ ದೂರು ದಾಖಲಿಸಿಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ ವಕೀಲ ಹರ್ಷವರ್ಧನ್ ಪಾಟೀಲ್. ಒಂದೊಮ್ಮೆ ಪೊಲೀಸರು ದೂರು ದಾಖಲಿಸಿಕೊಳ್ಳದಿದ್ದ ಪಕ್ಷದಲ್ಲಿ ನ್ಯಾಯಾಲಯದಲ್ಲಿ ಖಾಸಗಿಯಾಗಿ ದೂರು ಸಲ್ಲಿಸುತ್ತೇನೆ ಎಂದು ಹರ್ಷವರ್ಧನ್ ಹೇಳಿದ್ದಾರೆ.
ದೂರು ನೀಡಿದ ಹರ್ಷವರ್ಧನ್ ಪಾಟೀಲ್, ನಟಿ ಕಂಗನಾ ರಣೌತ್ ರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ರದ್ದು ಮಾಡಬೇಕು, ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.