Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರನ್ನು ಭಯೋತ್ಪಾದಕರೆಂದ ಕಂಗನಾ ವಿರುದ್ಧ ಬೆಳಗಾವಿಯಲ್ಲಿ ದೂರು
ಹಿಡಿತವಿಲ್ಲದ ಟ್ವೀಟ್ಗಳಿಂದಾಗಿ ಪದೇ-ಪದೇ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ನಟಿ ಕಂಗನಾ ರಣೌತ್. ಆದರೂ ಅವರಿಗೆ ಬುದ್ಧಿ ಬಂದಂತಿಲ್ಲ. ಈ ಹಿಂದೆ ರೈತ ಮಹಿಳೆಯ ಬಗ್ಗೆ ಬಹು ಕೀಳಾಗಿ ಟ್ವೀಟ್ ಮಾಡಿ ಕೆಂಗಣ್ಣಿಗೆ ಗುರಿಯಾಗಿದ್ದ ಕಂಗನಾ ಈಗ ಮತ್ತೊಮ್ಮೆ ರೈತರನ್ನು ಭಯೋತ್ಪಾದಕರು ಎಂದಿದ್ದಾರೆ.
ರೈತ ಪ್ರತಿಭಟನೆಗೆ ಬೆಂಬಲ ನೀಡಿ ಅಂತರಾಷ್ಟ್ರೀಯ ಪಾಪ್ ತಾರೆ ರಿಹಾನ್ನ ಮಾಡಿದ್ದ ಟ್ವೀಟ್ಗೆ ಪ್ರತಿಟ್ವೀಟ್ ಮಾಡಿದ್ದ ನಟಿ ಕಂಗನಾ ರಣೌತ್, 'ಅಲ್ಲಿ ಪ್ರತಿಭಟಿಸುತ್ತಿರುವವರು ರೈತರಲ್ಲ, ಭಯೋತ್ಪಾದಕರು' ಎಂದಿದ್ದರು. ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ ಕಂಗನಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹಲವು ಕಡೆ ದೂರುಗಳು ಸಹ ದಾಖಲಾಗಿದ್ದವು. ಇದೀಗ ರಾಜ್ಯದ ಬೆಳಗಾವಿಯಲ್ಲಿ ಸಹ ಕಂಗನಾ ವಿರುದ್ಧ ದೂರು ದಾಖಲಾಗಿದೆ.
ಬೆಳಗಾವಿಯ ನ್ಯಾಯವಾದಿ ಹರ್ಷವರ್ಧನ ಪಾಟೀಲ್ ಅವರು ನಟಿ ಕಂಗನಾ ರಣೌತ್ ವಿರುದ್ಧ ಟಿಳಕವಾಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಕಂಗನಾ ವಿರುದ್ಧ ದೂರು ದಾಖಲಿಸಿಕೊಳ್ಳಲು ಕಾಲಾವಕಾಶ ಕೋರಿದ್ದಾರೆ ಪೊಲೀಸರು.
ಐಪಿಸಿ ಸೆಕ್ಷನ್ 153, 153(A) 503, 504, 505 (1), 505 (B), 505 (c), 505(2), 506 ಅಡಿ ದೂರು ದಾಖಲಿಸಿಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ ವಕೀಲ ಹರ್ಷವರ್ಧನ್ ಪಾಟೀಲ್. ಒಂದೊಮ್ಮೆ ಪೊಲೀಸರು ದೂರು ದಾಖಲಿಸಿಕೊಳ್ಳದಿದ್ದ ಪಕ್ಷದಲ್ಲಿ ನ್ಯಾಯಾಲಯದಲ್ಲಿ ಖಾಸಗಿಯಾಗಿ ದೂರು ಸಲ್ಲಿಸುತ್ತೇನೆ ಎಂದು ಹರ್ಷವರ್ಧನ್ ಹೇಳಿದ್ದಾರೆ.
Recommended Video
ದೂರು ನೀಡಿದ ಹರ್ಷವರ್ಧನ್ ಪಾಟೀಲ್, ನಟಿ ಕಂಗನಾ ರಣೌತ್ ರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ರದ್ದು ಮಾಡಬೇಕು, ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.