Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರನ್ನು ಭಯೋತ್ಪಾದಕರೆಂದ ಕಂಗನಾ ವಿರುದ್ಧ ಬೆಳಗಾವಿಯಲ್ಲಿ ದೂರು
ಹಿಡಿತವಿಲ್ಲದ ಟ್ವೀಟ್ಗಳಿಂದಾಗಿ ಪದೇ-ಪದೇ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ನಟಿ ಕಂಗನಾ ರಣೌತ್. ಆದರೂ ಅವರಿಗೆ ಬುದ್ಧಿ ಬಂದಂತಿಲ್ಲ. ಈ ಹಿಂದೆ ರೈತ ಮಹಿಳೆಯ ಬಗ್ಗೆ ಬಹು ಕೀಳಾಗಿ ಟ್ವೀಟ್ ಮಾಡಿ ಕೆಂಗಣ್ಣಿಗೆ ಗುರಿಯಾಗಿದ್ದ ಕಂಗನಾ ಈಗ ಮತ್ತೊಮ್ಮೆ ರೈತರನ್ನು ಭಯೋತ್ಪಾದಕರು ಎಂದಿದ್ದಾರೆ.
ರೈತ ಪ್ರತಿಭಟನೆಗೆ ಬೆಂಬಲ ನೀಡಿ ಅಂತರಾಷ್ಟ್ರೀಯ ಪಾಪ್ ತಾರೆ ರಿಹಾನ್ನ ಮಾಡಿದ್ದ ಟ್ವೀಟ್ಗೆ ಪ್ರತಿಟ್ವೀಟ್ ಮಾಡಿದ್ದ ನಟಿ ಕಂಗನಾ ರಣೌತ್, 'ಅಲ್ಲಿ ಪ್ರತಿಭಟಿಸುತ್ತಿರುವವರು ರೈತರಲ್ಲ, ಭಯೋತ್ಪಾದಕರು' ಎಂದಿದ್ದರು. ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ ಕಂಗನಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹಲವು ಕಡೆ ದೂರುಗಳು ಸಹ ದಾಖಲಾಗಿದ್ದವು. ಇದೀಗ ರಾಜ್ಯದ ಬೆಳಗಾವಿಯಲ್ಲಿ ಸಹ ಕಂಗನಾ ವಿರುದ್ಧ ದೂರು ದಾಖಲಾಗಿದೆ.
ಬೆಳಗಾವಿಯ ನ್ಯಾಯವಾದಿ ಹರ್ಷವರ್ಧನ ಪಾಟೀಲ್ ಅವರು ನಟಿ ಕಂಗನಾ ರಣೌತ್ ವಿರುದ್ಧ ಟಿಳಕವಾಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಕಂಗನಾ ವಿರುದ್ಧ ದೂರು ದಾಖಲಿಸಿಕೊಳ್ಳಲು ಕಾಲಾವಕಾಶ ಕೋರಿದ್ದಾರೆ ಪೊಲೀಸರು.
ಐಪಿಸಿ ಸೆಕ್ಷನ್ 153, 153(A) 503, 504, 505 (1), 505 (B), 505 (c), 505(2), 506 ಅಡಿ ದೂರು ದಾಖಲಿಸಿಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ ವಕೀಲ ಹರ್ಷವರ್ಧನ್ ಪಾಟೀಲ್. ಒಂದೊಮ್ಮೆ ಪೊಲೀಸರು ದೂರು ದಾಖಲಿಸಿಕೊಳ್ಳದಿದ್ದ ಪಕ್ಷದಲ್ಲಿ ನ್ಯಾಯಾಲಯದಲ್ಲಿ ಖಾಸಗಿಯಾಗಿ ದೂರು ಸಲ್ಲಿಸುತ್ತೇನೆ ಎಂದು ಹರ್ಷವರ್ಧನ್ ಹೇಳಿದ್ದಾರೆ.
Recommended Video
ದೂರು ನೀಡಿದ ಹರ್ಷವರ್ಧನ್ ಪಾಟೀಲ್, ನಟಿ ಕಂಗನಾ ರಣೌತ್ ರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ರದ್ದು ಮಾಡಬೇಕು, ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.