Don't Miss!
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿದಾಯ' ಚಲನಚಿತ್ರದ ಜೊತೆ ಬೆಳ್ಳಿ ಮಾತುಗಳು
ಕರ್ನಾಟಕ ಚಲನಚಿತ್ರ ಅಕಾಡೆಮಿಯು ಪ್ರತಿ ಶನಿವಾರ ನಡೆಸುವ 'ಬೆಳ್ಳಿ ಸಿನಿಮಾ ಬೆಳ್ಳಿ ಮಾತು' ಕಾರ್ಯಕ್ರಮದಲ್ಲಿ ಈ ಶನಿವಾರ ನಿರ್ದೇಶಕ ಪಿ.ಶೇಷಾದ್ರಿ ಅವರ 'ವಿದಾಯ' ಸಿನಿಮಾ ಪ್ರದರ್ಶನಗೊಳ್ಳಲಿದೆ.
ನಟಿ ಲಕ್ಷ್ಮಿ ಗೋಪಾಲ ಸ್ವಾಮಿ, ಹಿರಿಯ ನಟ ದತ್ತಣ್ಣ, ನಟ ಸುಚೇಂದ್ರ ಪ್ರಸಾದ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಮಿಂಚಿರುವ 'ವಿದಾಯ' ಸಿನಿಮಾ ಬೆಳ್ಳಿ ಸಿನಿಮಾ ಬೆಳ್ಳಿ ಮಾತು ಕಾರ್ಯಕ್ರಮಕ್ಕೆ ಈ ಬಾರಿ ಆಯ್ಕೆ ಆಗಿದೆ.[ಬೆಳ್ಳಿ ಮಾತಿನಲ್ಲಿ ಪವರ್ ಸ್ಟಾರ್ ಪವರ್ ಫುಲ್ ಮಾತುಗಳು]
ಫೆಬ್ರವರಿ 20 ರಂದು ಶನಿವಾರ ಸಂಜೆ 4-00 ಗಂಟೆಗೆ ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಬೆಳ್ಳಿ ಸಿನಿಮಾ "ವಿದಾಯ" ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಹೆಚ್. ಬಿ. ದಿನೇಶ್ ಅವರು ತಿಳಿಸಿದ್ದಾರೆ.[ಬೆಳ್ಳಿ ಸಿನಿಮಾದಲ್ಲಿ 'ರಂಗಿತರಂಗ' ತಂಡದ ಬೆಳ್ಳಿ ಮಾತು]
ಅಂದಹಾಗೆ "ವಿದಾಯ " ಚಲನಚಿತ್ರ ಪ್ರದರ್ಶನದ ನಂತರ ಚಿತ್ರದ ನಿರ್ದೇಶಕ ಪಿ. ಶೇಷಾದ್ರಿ ಅವರ ಬೆಳ್ಳಿಮಾತು - ಸಂವಾದ ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ "ವಿದಾಯ" ಚಿತ್ರದ ನಿರ್ಮಾಪಕ ಬಸಂತ ಕುಮಾರ್ ಪಾಟೀಲ್, ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಮ್ ಹಾಗೂ ಚಿತ್ರನಟಿ ಲಕ್ಷ್ಮೀ ಗೋಪಾಲಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ ಬಾಬು ವಹಿಸಲಿದ್ದಾರೆ.