Don't Miss!
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೆವರೇಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಎದೆಗಾರಿಕೆ' ಬಗ್ಗೆ ಸುಮನಾ ಕಿತ್ತೂರು ಜೊತೆ ಬೆಳ್ಳಿ ಮಾತು
ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರತಿ ಶನಿವಾರ ನಡೆಸುವ 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಕಾರ್ಯಕ್ರಮದಲ್ಲಿ ಈ ಶನಿವಾರ (ಡಿಸೆಂಬರ್ 05) 'ಎದೆಗಾರಿಕೆ' ಚಲನಚಿತ್ರ ಪ್ರದರ್ಶನಗೊಳ್ಳಲಿದ್ದು, ಚಿತ್ರದ ನಿರ್ದೇಶಕಿ ಸುಮನಾ ಕಿತ್ತೂರು ಅವರು 'ಬೆಳ್ಳಿಮಾತು' ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕನ್ನಡ ಪ್ರಶಸ್ತಿ ಪುರಸ್ಕೃತ ಹಾಗೂ ಸದಭಿರುಚಿಯ ಕನ್ನಡ ಚಿತ್ರಗಳನ್ನು ವಾರಕ್ಕೊಮ್ಮೆ ಅಂದರೆ ಪ್ರತಿ ಶನಿವಾರ ಪ್ರದರ್ಶಿಸಿ ಆ ಚಿತ್ರಕ್ಕೆ ಸಂಬಂಧಿಸಿದ ನಿರ್ದೇಶಕರು, ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರೊಡನೆ ಸಂವಾದ ನಡೆಸಲು ಅವಕಾಶ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ.
'ಭೂಗತ ಜಗತ್ತಿನ ಘಟನೆಗಳನ್ನು ಹೆಣೆಯಲಾದ 'ಎದೆಗಾರಿಕೆ' ಕಥೆಯಲ್ಲಿ ಕೊಲ್ಲುವವನ ಮತ್ತು ಸಾಯಲಿಕ್ಕೆ ಬಂದವನ ನಡುವಿನ ವಾಸ್ತವ ವಿಚಾರಗಳನ್ನು ತೋರುವ ಚಿತ್ರ, ಪತ್ರಕರ್ತ ಮತ್ತು ಚಿಂತಕ ಅಗ್ನಿ ಶ್ರೀಧರ್ ಅವರ 'ಎದೆಗಾರಿಕೆ' ಕಾದಂಬರಿಯನ್ನು ಆಧರಿಸಿದ ಈ ಚಿತ್ರ ಅನಾಥನೊಬ್ಬನ ಬದುಕಿನಲ್ಲಿ ಜರುಗುವ ತವಕ-ತಲ್ಲಣಗಳನ್ನು ಚಿತ್ರಿಸುತ್ತದೆ.['ಪ್ರಕೃತಿ' ಸಿನಿಮಾ ಜೊತೆ ಬೆಳ್ಳಿ ಸಿನಿಮಾ-ಬೆಳ್ಳಿ ಮಾತು]
ಕಾದಂಬರಿ ಆಧರಿಸಿ ತಯಾರಾದ 'ಎದೆಗಾರಿಕೆ' ಚಿತ್ರ 2012ನೇ ಸಾಲಿನ ತೃತೀಯ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾಗಿದೆ.
'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಈ ವಾರದ ಕಾರ್ಯಕ್ರಮ ಬೆಂಗಳೂರು ಮಿಲ್ಲರ್ಸ್ ರಸ್ತೆಯ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಆಗಸ್ಟ್ 8 ರಂದು ಸಂಜೆ 4 ಗಂಟೆಗೆ ನಡೆಯಲಿದೆ.['ಬೆಳ್ಳಿ ಸಿನೆಮಾ-ಬೆಳ್ಳಿ ಮಾತು' ಸಿನಿ ರಸಿಕರೊಡನೆ ಸಂವಾದ]
ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಎಸ್.ವಿ ರಾಜೇಂದ್ರ ಸಿಂಗ್ ಬಾಬು ಅವರು ವಹಿಸಲಿದ್ದು, ನಿರ್ದೇಶಕಿ ಸುಮನಾ ಕಿತ್ತೂರು, ನಟ ಆದಿತ್ಯ, ಧರ್ಮ, ನಿರ್ಮಾಪಕರಾದ ಎಂ.ಎಸ್. ರವೀಂದ್ರ ಅವರು ಉಪಸ್ಥಿತರಿರುತ್ತಾರೆ.