'ಬೆಳ್ಳಿ ಹೆಜ್ಜೆ' ಸಂವಾದ ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ.!

By Suneetha

ಕರ್ನಾಟಕ ಚಲನಚಿತ್ರ ಅಕಾಡೆಮಿಯು ನವೆಂಬರ್ 30 ರ ಸೋಮವಾರ ಸಂಜೆ 5 ಘಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಚಲನಚಿತ್ರ ರಂಗದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರೊಂದಿಗೆ ಬೆಳ್ಳಿಹೆಜ್ಜೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅತೀ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ 'ಬೆಳ್ಳಿ ಹೆಜ್ಜೆ' ಹಿರಿಯರ, ಸಾಧಕರ, ನಟರ, ಗಾಯಕರ ಮಧುರ ನೆನಪುಗಳ ಮೆರವಣಿಗೆಯಾಗಿದೆ.[ಮೈಸೂರು: 'ಬೆಳ್ಳಿ ಸಿನಿಮಾ- ಬೆಳ್ಳಿ ಮಾತು' ಟಿ.ಎಸ್ ನಾಗಾಭರಣ ಅತಿಥಿ]

ಸಮಾರಂಭದ ಮುಖ್ಯ ಅತಿಥಿಗಳಾಗಿ ಮೂಲ ಸೌಲಭ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್, ಹಿರಿಯ ಚಲನಚಿತ್ರ ನಿರ್ಮಾಪಕಿ ಶ್ರೀಮತಿ ಪಾರ್ವತಮ್ಮ ರಾಜ್‌ಕುಮಾರ್, ಹಿರಿಯ ಚಲನಚಿತ್ರ ನಿರ್ಮಾಪಕ ದೊರೈ ಭಗವಾನ್, ಚಲನಚಿತ್ರ ಕಲಾವಿದೆ ಶ್ರೀಮತಿ ಸುಧಾರಾಣಿ ಭಾಗವಹಿಸಲಿದ್ದಾರೆ.[ಜುಲೈ 25 ರಂದು 'ಡಿಸೆಂಬರ್ 1' ಚಿತ್ರ ಪ್ರದರ್ಶನ ಸಂವಾದ]

ಜೊತೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ. ರಾ. ಗೋವಿಂದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್. ಆರ್. ವಿಶುಕುಮಾರ್ ಅವರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹೆಚ್.ಬಿ. ದಿನೇಶ್ ಅವರು ತಿಳಿಸಿದ್ದಾರೆ.

More from Filmibeat

English summary
Belli - Hejje program organized by Karnataka Chalana Chitra Academy on 30th November 5 pm in Ravindra Kalakshethra Bengaluru. Kannada Actor Shivaraj Kumar will be guest.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X