ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಶಕ್ಕೆ ಪಡೆದ ಸಂಬಂಧ ಪೊಲೀಸ್ ಆಯುಕ್ತ ಮಾಹಿತಿ
ಕೊಲೆ ಪ್ರಕರಣ ಸಂಬಂಧ ಕನ್ನಡ ಚಿತ್ರನಟ ದರ್ಶನ್ ಬಂಧನವಾಗಿದೆ. ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
"ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಒಂದು ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಕನ್ನಡ ಚಿತ್ರನಟ ದರ್ಶನ್ ವಶಕ್ಕೆ ಪಡೆದು ಪ್ರಶ್ನೆ ಮಾಡಲಾಗುತ್ತಿದೆ. ಈ ಕೊಲೆ ಆಗಿರುವುದ ಜೂನ್ 9ರಂದು. ಗುರುತು ಸಿಗದ ವ್ಯಕ್ತಿಯ ಶವದ ಗಾಯಗಳನ್ನು ಗಮನಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ನಂತರ ಸಿಸಿಟಿವಿ ದೃಶ್ಯಗಳು ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳ ಮೇಲೆ ಆತಗು ಗುರುತು ಗೊತ್ತಾಯಿತು."

"ಆತ ಚಿತ್ರದುರ್ಗ ನಗರದ ರೇಣುಕಾಸ್ವಾಮಿ(33) ಎಂದು ಗೊತ್ತಾಯಿತು. ಅದರ ಆಧಾರದ ಮೇಲೆ ಮುಂದಿನ ತನಿಖೆ ಕೈಗೊಳ್ಳಲಾಯಿತು. ಅದರ ಆಧಾರದಲ್ಲಿ ಕನ್ನಡ ಚಿತ್ರನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ. ತನಿಖೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಸದ್ಯಕ್ಕೆ ಹೆಚ್ಚಿನ ಮಾಹಿತಿ ನೀಡುವುದು ಕಷ್ಟ. ದರ್ಶನ್ ಅವರನ್ನು ಸದ್ಯಕ್ಕೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ"
"ರೇಣುಕಾಸ್ವಾಮಿ ನಟ ದರ್ಶನ್ ಅವರ ಪತ್ನಿ ಅಸಭ್ಯ ಮೆಸೇಜ್ ಕಳುಹಿಸುತ್ತಿದ್ದ ಎನ್ನಲಾಗಿದೆ. ಅದಕ್ಕೆ ಈ ಘಟನೆ ನಡೆದಿದೆ ಎನ್ನುವುದು ಪ್ರಾಥಮಿಕ ವಿಚಾರಣೆಯಲ್ಲಿ ಗೊತ್ತಾಗಿದೆ. ನಟ ದರ್ಶನ್ ಸೇರಿದಂತೆ 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದೇವೆ" ಎಂದು ಮಾಹಿತಿ ನೀಡಿದ್ದಾರೆ.


Click it and Unblock the Notifications











