Don't Miss!
- News Dingaleshwar Swamiji: ಕೋಟಿ ಒಡೆಯ ದಿಂಗಾಲೇಶ್ವರ ಸ್ವಾಮೀಜಿಯ ಆಸ್ತಿ ವಿವರ ತಿಳಿಯಿರಿ
- Sports PBKS vs MI: ಐಪಿಎಲ್ನಲ್ಲಿ ಈ ಇತಿಹಾಸ ನಿರ್ಮಿಸಿದ 2ನೇ ಆಟಗಾರ ರೋಹಿತ್ ಶರ್ಮಾ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ಚಿತ್ರೋತ್ಸವ:ಮೂಕಜ್ಜಿಯ ಕನಸು, ಕೆಜಿಎಫ್ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ
Recommended Video
ಬೆಂಗಳೂರು, ಫೆಬ್ರವರಿ 28: ಬೆಂಗಳೂರು 11ನೇ ಚಿತ್ರೋತ್ಸವದಲ್ಲಿ ಮೂಕಜ್ಜಿಯ ಕನಸು ಚಿತ್ರವು ಅತ್ಯುತ್ತಮ ಕನ್ನಡ ಚಲನಚಿತ್ರ ವಿಭಾಗದ ಪ್ರಶಸ್ತಿಗೆ ಭಾಜನವಾಗಿದೆ. ಕೆಜಿಎಫ್ ಚಿತ್ರವು ಮನೋರಂಜನಾತ್ಮಕ ಚಿತ್ರ ವಿಭಾಗದ ಉತ್ತಮ ಚಿತ್ರ ಪ್ರಶಸ್ತಿ ಬಾಚಿಕೊಂಡಿದೆ.
ಕನ್ನಡ ಚಿತ್ರ ವಿಭಾಗದ ಎರಡನೇ ಉತ್ತಮ ಚಿತ್ರ ಪ್ರಶಸ್ತಿಗೆ ಸಾವಿತ್ರಬಾ ಫುಲೆ, ಮೂರನೇ ಪ್ರಶಸ್ತಿಗೆ ರಾಮನ ಸವಾರಿ ಚಿತ್ರವು ಭಾಜನವಾಗಿದೆ.
ಮನೊರಂಜನಾತ್ಮಕ ಚಿತ್ರ ವಿಭಾಗದಲ್ಲಿ ಕೆಜಿಎಫ್ ಮೊದಲ ಸ್ಥಾನ ಪಡೆದರೆ, ಎರಡನೇ ಪ್ರಶಸ್ತಿಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಚಿತ್ರ ಪಡೆದುಕೊಂಡಿದೆ. ಶಿವಣ್ಣ ಅಭಿನಯದ ಟಗರು ಸಿನಿಮಾ ಮೂರನೇ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
'ನಾತಿಚಾರಮಿ' ಚಿತ್ರವು ಕನ್ನಡ ವಿಭಾಗದಲ್ಲಿ ತೀರ್ಪುಗಾರರ ವಿಶೇಷ ಪ್ರಶಸ್ತಿಗೆ ಆಯ್ಕೆ ಆಗಿದೆ. ಭಾರತೀಯ ಸಿನಿಮಾ ವಿಭಾಗದಲ್ಲಿ 'ಗೋಡೆಕೋ ಜಿಲೇಬಿ ಕಿಲಾನೆ ಲೇ ಜಾ ರಹಾ ಹೂಂ' ಚಿತ್ರವು ಉತ್ತಮ ಚಿತ್ರವಾಗಿ ಆಯ್ಕೆ ಆಗಿದೆ.
ತೀರ್ಪುಗಾರರ ವಿಶೇಷ ಪ್ರಶಸ್ತಿಗೆ 'ಆಮೃತ್ಯು' ಸಿನಿಮಾ ಭಾಜನವಾಗಿದೆ. ವಿಮರ್ಶಕರ ಉತ್ತಮ ಚಿತ್ರ ಪ್ರಶಸ್ತಿ ಸಹ 'ಗೋಡೆಕೋ ಜಿಲೇಬಿ ಕಿಲಾನೆ ಲೇ ಜಾ ರಹಾ ಹೂಂ' ಗೆ ಸೇರಿದೆ.
ಏಷ್ಯನ್ ಸಿನಿಮಾ ವಿಭಾಗದಲ್ಲಿ ತಮಿಳಿನ ಶಿವರಂಜನಿಯುಂ ಇನ್ನುಂ ಸಿಲ ಪೆಂಗಳುಂ' ಚಿತ್ರ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ.