Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರಗೂರು ರಾಮಚಂದ್ರಪ್ಪ ಹಿರಿಮೆಗೆ ಮತ್ತೊಂದು ಗರಿ
'ಜನುಮದ ಜೋಡಿ', 'ಹಗಲುವೇಷ' ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಿಗೆ 'ಅತ್ತ್ಯುತ್ತಮ ಗೀತ ಸಾಹಿತಿ', 'ಅತ್ತ್ಯುತ್ತಮ ಸಂಭಾಷಣೆಕಾರ' ಪ್ರಶಸ್ತಿಗಳನ್ನ ಪಡೆದಿರುವ ಖ್ಯಾತ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ರವರ ಹಿರಿಮೆಗೆ ಮತ್ತೊಂದು ಗರಿ ಸಿಕ್ಕಿದೆ.
ಇತ್ತೀಚೆಗಷ್ಟೆ ರಾಜಸ್ಥಾನದ ಜೈಪುರದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಿತು. ಅದರಲ್ಲಿ ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಮರಣದಂಡನೆ' ಚಿತ್ರ ಸ್ಪರ್ಧಾವಿಭಾಗಕ್ಕೆ ಆಯ್ಕೆ ಆಯ್ತು. ಇದೇ ಚಿತ್ರದ ನಿರ್ದೇಶನಕ್ಕಾಗಿ ಬರಗೂರು ರಾಮಚಂದ್ರಪ್ಪ 'ಪ್ರಾದೇಶಿಕ ಚಿತ್ರಗಳ ಅತ್ತ್ಯುತ್ತಮ ನಿರ್ದೇಶಕ' ಪ್ರಶಸ್ತಿಯನ್ನ ಪಡೆದಿದ್ದಾರೆ.
'ಮರಣದಂಡನೆ' ಚಿತ್ರದ ಕುರಿತು - ಸಹಿಷ್ಣುತೆ ಮತ್ತು ಸಾವಿನ ಸಮಸ್ಯೆಯನ್ನು ಶೋಧಿಸುವ ಸಿನಿಮಾ 'ಮರಣದಂಡನೆ'. ಕಾರಾಗೃಹದಲ್ಲಿ ಗಲ್ಲಿಗೇರಿಸುವ ಕೆಲಸ ಮಾಡುತ್ತಿದ್ದ ಹುಸೇನ್, ತಾನೇ ಗಲ್ಲಿಗೇರಬೇಕಾದ ಸಂದರ್ಭ ಒದಗಿ ಬಂದಾಗ ಎದುರಿಸುವ ತಲ್ಲಣ ಚಿತ್ರದ ಹೂರಣ.
'ಮರಣದಂಡನೆ' ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ, ನಿರ್ದೇಶನ ಮಾಡಿದವರು ಬರಗೂರು ರಾಮಚಂದ್ರಪ್ಪ. ಚಿತ್ರಕ್ಕೆ ಮುರುಳೀಧರ ಹಾಲಪ್ಪ ಬಂಡವಾಳ ಹಾಕಿದ್ರೆ, ಹಂಸಲೇಖ ಸಂಗೀತ ಸಂಯೋಜಿಸಿದ್ದಾರೆ.