Don't Miss!
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- News 2nd Phase Election: ಇಂದಿನಿಂದ 12 ರಾಜ್ಯಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭೈರತಿ ರಣಗಲ್ಲು' ಸಿನಿಮಾದ ಬಗ್ಗೆ ಮೌನ ಮುರಿದ ನರ್ತನ್
Recommended Video
'ಮಫ್ತಿ' ಸಿನಿಮಾದ ಶಿವರಾಜ್ ಕುಮಾರ್ ಪಾತ್ರ ಸಿನಿಮಾ ಆಗುತ್ತಿದೆ. 'ಭೈರತಿ ರಣಗಲ್ಲು' ಸಿನಿಮಾದ ಸುದ್ದಿ ಈಗಾಗಲೇ ಬಂದಿದ್ದು, ಮುಂದಿನ ವರ್ಷ ಚಿತ್ರ ಪ್ರಾರಂಭ ಆಗಲಿದೆ. ಈ ಚಿತ್ರದ ಬಗ್ಗೆ ಕೆಲ ವಿಷಯವನ್ನು ನಿರ್ದೇಶಕ ನರ್ತನ್ ತಿಳಿಸಿದ್ದಾರೆ.
'ಭೈರತಿ ರಣಗಲ್ಲು' ಪಾತ್ರದ ಹುಟ್ಟಿನ ಬಗ್ಗೆ 'ಮಫ್ತಿ' ನಿರ್ದೇಶಕರ ಮಾತು!
'ಭರಾಟೆ' ಸಿನಿಮಾದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನರ್ತನ್ ತಮ್ಮ 'ಭೈರತಿ ರಣಗಲ್ಲು' ಚಿತ್ರದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಈ ಸಿನಿಮಾದ ಕಥೆಯ ಕೆಲಸಗಳು ಸದ್ಯ ನಡೆಯುತ್ತಿದ್ದು, 2020ಕ್ಕೆ ಸಿನಿಮಾ ಲಾಂಚ್ ಆಗಲಿದೆಯಂತೆ.
'ಭೈರತಿ ರಣಗಲ್ಲು' ಪಾತ್ರದ ಪೂರ್ವಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆಯಂತೆ. ಭೈರತಿ ರಣಗಲ್ಲು ಪಾತ್ರದ ಹಿನ್ನಲೆಯೇ ಈ ಚಿತ್ರದ ನಿರೂಪಣೆ ಆಗಲಿದೆ ಎನ್ನುವುದು ನರ್ತನ್ ಮಾತಿನ ಮೂಲಕ ತಿಳಿಯುತ್ತದೆ. ಚಿತ್ರದ ಕೊನೆಯಲ್ಲಿ ಶ್ರೀಮುರಳಿ ಎಂಟ್ರಿ ಆಗುವ ಸಾಧ್ಯತೆ ಇದೆ.
ಟಾಲಿವುಡ್ ನಲ್ಲಿ ಮಫ್ತಿ: ಯಾರಾಗ್ತಾರೆ ಭೈರತಿ ರಣಗಲ್ಲು
ಅಂದಹಾಗೆ, ಇದು ಶಿವರಾಜ್ ಕುಮಾರ್ ನಟನೆಯ 125ನೇ ಸಿನಿಮಾವಾಗಿದ್ದು, ಶ್ರೀಮುತ್ತು ಬ್ಯಾನರ್ ನಲ್ಲಿ ನಿರ್ಮಾಣ ಆಗಲಿದೆ. ಶಿವಣ್ಣ ಬಂಡವಾಳ ಹಾಕುತ್ತಿರುವ ಮೊದಲ ಸಿನಿಮಾ ಇದಾಗಿದೆ.
ಈ ಸಿನಿಮಾದ ನಂತರ ಶ್ರೀ ಮುರಳಿ ಜೊತೆಗೆ ನರ್ತನ್ ಮತ್ತೊಂದು ಸಿನಿಮಾ ಮಾಡುವ ಯೋಚನೆ ಇದೆ ಎಂದು ತಿಳಿಸಿದ್ದಾರೆ.