Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತ್ ಬಂದ್ : ಚಿತ್ರಮಂದಿರಗಳಿಗೂ ತಟ್ಟಿದ ಬಂದ್ ಬಿಸಿ
ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಕರೆ ನೀಡಿರುವ ಭಾರತ್ ಬಂದ್ ಗೆ ದೇಶದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. ಹಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಕರ್ನಾಟಕದಲ್ಲಿ ಬಂದ್ ಗೆ ಕೆಲವೆಡೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದ್ದರೆ, ಇನ್ನೂ ಕೆಲವೆಡೆ ಜನ ಜೀವನ ಎಂದಿನಂತಿದೆ. ಸದಾ ಗಿಜಿಗುಡುತ್ತಿದ್ದ ಮೆಜೆಸ್ಟಿಕ್ ಸೇರಿದಂತೆ ಬೆಂಗಳೂರಿನ ಹಲವು ಪ್ರಮುಖ ರಸ್ತೆಗಳು ಇಂದು ಖಾಲಿ ಖಾಲಿ.
ಭಾರತ್ ಬಂದ್ ನಿಂದಾಗಿ ಕನ್ನಡ ಚಿತ್ರೋದ್ಯಮಕ್ಕೂ ಬಿಸಿ ತಟ್ಟಿದೆ. ಇಂದು ಬಂದ್ ಇದ್ದರೂ, ಕರ್ನಾಟಕದ ಬಹುತೇಕ ಚಿತ್ರಮಂದಿರಗಳು ತೆರೆದಿದ್ದವು. ಶಾಲಾ-ಕಾಲೇಜುಗಳಿಗೆ ರಜೆ ಇದ್ದ ಪರಿಣಾಮ, ಪ್ರೇಕ್ಷಕರು ಚಿತ್ರಮಂದಿರದತ್ತ ಧಾವಿಸುತ್ತಾರೆ ಅನ್ನುವ ನಿರೀಕ್ಷೆ ಇತ್ತು. [ಭಾರತ್ ಬಂದ್ ಏಕೆ? ಪ್ರತಿಭಟನೆಗೆ ಕಾರಣವೇನು?]
ಆದ್ರೆ, ಬಹುತೇಕ ಎಲ್ಲಾ ಚಿತ್ರಮಂದಿರಗಳು ಇಂದು ಖಾಲಿ ಹೊಡೆಯುತ್ತಿವೆ. ಮೆಜೆಸ್ಟಿಕ್ ನಲ್ಲಿರುವ ಸಂತೋಷ್, ನರ್ತಕಿ, ಕಪಾಲಿ ಸೇರಿದಂತೆ ಪ್ರಮುಖ ಥಿಯೇಟರ್ ಗಳು ಬಿಕೋ ಎನ್ನುತ್ತಿವೆ.
'ಉಪ್ಪಿ-2', 'ರಂಗಿತರಂಗ', 'ಬುಗುರಿ', 'ಆಟಗಾರ' ಚಿತ್ರಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿತ್ತು. ಆದ್ರೀಗ, ಬಂದ್ ಪರಿಣಾಮ ಎಲ್ಲಾ ಚಿತ್ರಗಳು ಇಂದು ಕಲೆಕ್ಷನ್ ನಲ್ಲಿ ಡಲ್ ಹೊಡೆದಿವೆ.