Don't Miss!
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- News Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣೆ ಹಿನ್ನಲೆ ಚಿತ್ರೀಕರಣಕ್ಕೆ ರಜೆ ನೀಡಿದ 'ಭರಾಟೆ' ಟೀಂ
ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ 'ಭರಾಟೆ' ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸದ್ಯ ಮೈಸೂರಿನಲ್ಲಿ ಬೀಡು ಬಿಟ್ಟಿರುವ ಚಿತ್ರತಂಡ ಲಲಿತ್ ಮಹಲ್ ಸೇರಿದಂತೆ ಮೈಸೂರಿನ ಸುಂದರ ತಾಣಗಳಲ್ಲಿ, ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ಮಾಡುತ್ತಿದೆ ಭರಾಟೆ ತಂಡ.
ರೋರಿಂಗ್ ಸ್ಟಾರ್ ಮತ್ತು ನಟಿ ಶ್ರೀಲೀಲಾ ಅವರ ರೋಮ್ಯಾಂಟಿಕ್ ದೃಶ್ಯಗಳನ್ನು ಸೆರೆ ಹಿಡಿಯುವಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡವೀಗ ದಿಢೀರನೆ ರಜೆ ಘೋಷಿಸಿದೆ. ಹೌದು, ಚುನಾವಣೆಯ ಹಿನ್ನಲೆ ಇಡೀ 'ಭರಾಟೆ' ಚಿತ್ರತಂಡಕ್ಕೆ ರಜೆ ನೀಡಲಾಗಿದೆ. ಇದೇ ತಿಂಗಳು 18ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಚಿತ್ರತಂಡದ ಮತದಾನ ಮಾಡುವ ಉದ್ದೇಶದಿಂದ ರಜೆ ನೀಡಲಾಗಿದೆ.
ಮೈಸೂರಿನಲ್ಲಿ ಶ್ರೀಮರಳಿ-ಶ್ರೀಲೀಲಾ 'ಭರಾಟೆ' ಡ್ಯುಯೆಟ್
ಅಂದ್ಹಾಗೆ 'ಭರಾಟೆ' ನಿರ್ದೇಶಕ ಚೇತನ್ ಕುಮಾರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಸುಪ್ರೀತ್ ನಿರ್ಮಾಣ ವಿರುವ 'ಭಾರಟೆ' ಚಿತ್ರದಲ್ಲಿ ದೊಡ್ಡ ಕಲಾವಿದರ ದಂಡೆ ಇದೆ. ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟಿ ತಾರಾ ಚಿತ್ರತಂಡದ ರಜೆಯ ಬಗ್ಗೆ ಹೇಳುವ ಜೊತೆಗೆ ಪ್ರತಿಯೊಬ್ಬರು ಮತದಾನ ಮಾಡಿ ಎಂದು ಹೇಳುವ ಮೂಲಕ ಮತದಾನದ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.
ಕೇವಲ 18ರಂದು ಮಾತ್ರವಲ್ಲದೆ ಏಪ್ರಿಲ್ 23ರಂದು ನಡೆಯುವ ಎರಡನೇ ಹಂತದ ಮತದಾನದ ದಿನ ಸಹ 'ಭರಾಟೆ' ತಂಡ ರಜೆ ಘೋಷಿಸಿದೆ. ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತಿರುವ 'ಭರಾಟೆ' ಚಿತ್ರ ಸಧ್ಯದಲ್ಲೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.