Don't Miss!
- News
ಕೃಷಿ ಪ್ರಶಸ್ತಿಗೆ ಭಾಜನರಾದವರ ಮಕ್ಕಳಿಗೆ ಕೃಷಿ ವಿವಿಯಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಸರ್ಕಾರದ ನೆರವು : ಬಸವರಾಜ ಬೊಮ್ಮಾಯಿ
- Sports
ಸಾಧು ಸಂತರಿಗೆ ಅನ್ನದಾನ ಮಾಡಿ ಆಶೀರ್ವಾದ ಪಡೆದ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಚುನಾವಣೆ ಹಿನ್ನಲೆ ಚಿತ್ರೀಕರಣಕ್ಕೆ ರಜೆ ನೀಡಿದ 'ಭರಾಟೆ' ಟೀಂ
ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ 'ಭರಾಟೆ' ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸದ್ಯ ಮೈಸೂರಿನಲ್ಲಿ ಬೀಡು ಬಿಟ್ಟಿರುವ ಚಿತ್ರತಂಡ ಲಲಿತ್ ಮಹಲ್ ಸೇರಿದಂತೆ ಮೈಸೂರಿನ ಸುಂದರ ತಾಣಗಳಲ್ಲಿ, ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ಮಾಡುತ್ತಿದೆ ಭರಾಟೆ ತಂಡ.
ರೋರಿಂಗ್ ಸ್ಟಾರ್ ಮತ್ತು ನಟಿ ಶ್ರೀಲೀಲಾ ಅವರ ರೋಮ್ಯಾಂಟಿಕ್ ದೃಶ್ಯಗಳನ್ನು ಸೆರೆ ಹಿಡಿಯುವಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡವೀಗ ದಿಢೀರನೆ ರಜೆ ಘೋಷಿಸಿದೆ. ಹೌದು, ಚುನಾವಣೆಯ ಹಿನ್ನಲೆ ಇಡೀ 'ಭರಾಟೆ' ಚಿತ್ರತಂಡಕ್ಕೆ ರಜೆ ನೀಡಲಾಗಿದೆ. ಇದೇ ತಿಂಗಳು 18ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಚಿತ್ರತಂಡದ ಮತದಾನ ಮಾಡುವ ಉದ್ದೇಶದಿಂದ ರಜೆ ನೀಡಲಾಗಿದೆ.
ಮೈಸೂರಿನಲ್ಲಿ
ಶ್ರೀಮರಳಿ-ಶ್ರೀಲೀಲಾ
'ಭರಾಟೆ'
ಡ್ಯುಯೆಟ್
ಅಂದ್ಹಾಗೆ 'ಭರಾಟೆ' ನಿರ್ದೇಶಕ ಚೇತನ್ ಕುಮಾರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಸುಪ್ರೀತ್ ನಿರ್ಮಾಣ ವಿರುವ 'ಭಾರಟೆ' ಚಿತ್ರದಲ್ಲಿ ದೊಡ್ಡ ಕಲಾವಿದರ ದಂಡೆ ಇದೆ. ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟಿ ತಾರಾ ಚಿತ್ರತಂಡದ ರಜೆಯ ಬಗ್ಗೆ ಹೇಳುವ ಜೊತೆಗೆ ಪ್ರತಿಯೊಬ್ಬರು ಮತದಾನ ಮಾಡಿ ಎಂದು ಹೇಳುವ ಮೂಲಕ ಮತದಾನದ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.
ಕೇವಲ 18ರಂದು ಮಾತ್ರವಲ್ಲದೆ ಏಪ್ರಿಲ್ 23ರಂದು ನಡೆಯುವ ಎರಡನೇ ಹಂತದ ಮತದಾನದ ದಿನ ಸಹ 'ಭರಾಟೆ' ತಂಡ ರಜೆ ಘೋಷಿಸಿದೆ. ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತಿರುವ 'ಭರಾಟೆ' ಚಿತ್ರ ಸಧ್ಯದಲ್ಲೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.