Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನೋರಂಜನ್ ರವಿಚಂದ್ರನ್ ಚೊಚ್ಚಲ ಚಿತ್ರದ ಚಿತ್ರೀಕರಣ ಫಿಕ್ಸ್.!
ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವರ ಚೊಚ್ಚಲ ಚಿತ್ರ 'ರಣಧೀರ...ಪ್ರೇಮಲೋಕದಲ್ಲಿ' ಸದ್ಯಕ್ಕೆ ಸೆಟ್ಟೇರುತ್ತಿಲ್ಲ ಅಂತ ಇಂದು ಬೆಳಗ್ಗೆಯಷ್ಟೇ ನಾವೇ ನಿಮಗೆ ಹೇಳಿದ್ವಿ.
ಇದೀಗ ಇದೇ ವಿಚಾರವಾಗಿ ಅಧಿಕೃತ ಮಾಹಿತಿ ಹೊರಬಿದ್ದಿದೆ. ಕನಸುಗಾರ ರವಿಚಂದ್ರನ್ ನಿರ್ಮಿಸಿ, ನಿರ್ದೇಶಿಸಬೇಕಿದ್ದ 'ರಣಧೀರ...ಪ್ರೇಮಲೋಕದಲ್ಲಿ' ಸಿನಿಮಾ ಮುಂದಕ್ಕೆ ಹೋಗಿರುವುದು ಪಕ್ಕಾ. ಇದಕ್ಕೆ ಕಾರಣ ನಿರ್ದೇಶಕ ಭರತ್ ರವರ ಚಿತ್ರಕಥೆ.!
ಹೌದು, ಈ ಹಿಂದೆ ಶ್ರೀಮುರುಳಿಗಾಗಿ 'ಕಂಠಿ' ಚಿತ್ರ ನಿರ್ದೇಶನ ಮಾಡಿದ್ದ ಭರತ್, ಕ್ರೇಜಿ ಸ್ಟಾರ್ ಪುತ್ರನಿಗಾಗಿ ಒಂದೊಳ್ಳೆ ಕಥೆ ರೆಡಿಮಾಡಿದ್ದರು. ಆ ಕಥೆಯನ್ನು ಕೇಳಿ ಇಷ್ಟಪಟ್ಟಿರುವ ರವಿಚಂದ್ರನ್ ಮತ್ತು ಮನೋರಂಜನ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೀಗಾಗಿ 'ರಣಧೀರ...ಪ್ರೇಮಲೋಕದಲ್ಲಿ' ಮುಂದಕ್ಕೆ ಹೋಗಿದೆ. [ರವಿಚಂದ್ರನ್ ಪುತ್ರ ಮನೋರಂಜನ್ 'ರಣಧೀರ' ಸಿನಿಮಾ ನಿಂತ್ಹೋಯ್ತಾ?]
ಇನ್ನೂ ಹೆಸರಿಡದ ಭರತ್ ನಿರ್ದೇಶಿಸುವ ಮನೋರಂಜನ್ ಚೊಚ್ಚಲ ಚಿತ್ರಕ್ಕೆ ಜಯಣ್ಣ-ಭೋಗೇಂದ್ರ ಬಂಡವಾಳ ಹಾಕಲಿದ್ದಾರೆ. ಸದ್ಯದಲ್ಲೇ ಚಿತ್ರದ ಮುಹೂರ್ತ ನೆರವೇರಲಿದ್ದು, ಡಿಸೆಂಬರ್ ನಲ್ಲಿ ಶೂಟಿಂಗ್ ಗೆ ಚಾಲನೆ ಸಿಗಲಿದೆ.
ಹಾಗ್ನೋಡಿದ್ರೆ, ಇಷ್ಟೊತ್ತಿಗೆ 'ರಣಧೀರ...ಪ್ರೇಮಲೋಕದಲ್ಲಿ' ಚಿತ್ರದ ಮೂಲಕ ಮನೋರಂಜನ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಬೇಕಿತ್ತು. ಆದ್ರೆ, ರಿಯಾಲಿಟಿ ಶೋ, ನಟನೆ ಮತ್ತು 'ಅಪೂರ್ವ' ಚಿತ್ರದಲ್ಲಿ ರವಿಚಂದ್ರನ್ ಬಿಜಿಯಾಗಿರುವ ಕಾರಣ 'ರಣಧೀರ...ಪ್ರೇಮಲೋಕದಲ್ಲಿ' ನಿಂತಲ್ಲೇ ನಿಂತಿದೆ.