Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನೋರಂಜನ್ ರವಿಚಂದ್ರನ್ ಚೊಚ್ಚಲ ಚಿತ್ರದ ಚಿತ್ರೀಕರಣ ಫಿಕ್ಸ್.!
ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವರ ಚೊಚ್ಚಲ ಚಿತ್ರ 'ರಣಧೀರ...ಪ್ರೇಮಲೋಕದಲ್ಲಿ' ಸದ್ಯಕ್ಕೆ ಸೆಟ್ಟೇರುತ್ತಿಲ್ಲ ಅಂತ ಇಂದು ಬೆಳಗ್ಗೆಯಷ್ಟೇ ನಾವೇ ನಿಮಗೆ ಹೇಳಿದ್ವಿ.
ಇದೀಗ ಇದೇ ವಿಚಾರವಾಗಿ ಅಧಿಕೃತ ಮಾಹಿತಿ ಹೊರಬಿದ್ದಿದೆ. ಕನಸುಗಾರ ರವಿಚಂದ್ರನ್ ನಿರ್ಮಿಸಿ, ನಿರ್ದೇಶಿಸಬೇಕಿದ್ದ 'ರಣಧೀರ...ಪ್ರೇಮಲೋಕದಲ್ಲಿ' ಸಿನಿಮಾ ಮುಂದಕ್ಕೆ ಹೋಗಿರುವುದು ಪಕ್ಕಾ. ಇದಕ್ಕೆ ಕಾರಣ ನಿರ್ದೇಶಕ ಭರತ್ ರವರ ಚಿತ್ರಕಥೆ.!
ಹೌದು, ಈ ಹಿಂದೆ ಶ್ರೀಮುರುಳಿಗಾಗಿ 'ಕಂಠಿ' ಚಿತ್ರ ನಿರ್ದೇಶನ ಮಾಡಿದ್ದ ಭರತ್, ಕ್ರೇಜಿ ಸ್ಟಾರ್ ಪುತ್ರನಿಗಾಗಿ ಒಂದೊಳ್ಳೆ ಕಥೆ ರೆಡಿಮಾಡಿದ್ದರು. ಆ ಕಥೆಯನ್ನು ಕೇಳಿ ಇಷ್ಟಪಟ್ಟಿರುವ ರವಿಚಂದ್ರನ್ ಮತ್ತು ಮನೋರಂಜನ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೀಗಾಗಿ 'ರಣಧೀರ...ಪ್ರೇಮಲೋಕದಲ್ಲಿ' ಮುಂದಕ್ಕೆ ಹೋಗಿದೆ. [ರವಿಚಂದ್ರನ್ ಪುತ್ರ ಮನೋರಂಜನ್ 'ರಣಧೀರ' ಸಿನಿಮಾ ನಿಂತ್ಹೋಯ್ತಾ?]
ಇನ್ನೂ ಹೆಸರಿಡದ ಭರತ್ ನಿರ್ದೇಶಿಸುವ ಮನೋರಂಜನ್ ಚೊಚ್ಚಲ ಚಿತ್ರಕ್ಕೆ ಜಯಣ್ಣ-ಭೋಗೇಂದ್ರ ಬಂಡವಾಳ ಹಾಕಲಿದ್ದಾರೆ. ಸದ್ಯದಲ್ಲೇ ಚಿತ್ರದ ಮುಹೂರ್ತ ನೆರವೇರಲಿದ್ದು, ಡಿಸೆಂಬರ್ ನಲ್ಲಿ ಶೂಟಿಂಗ್ ಗೆ ಚಾಲನೆ ಸಿಗಲಿದೆ.
ಹಾಗ್ನೋಡಿದ್ರೆ, ಇಷ್ಟೊತ್ತಿಗೆ 'ರಣಧೀರ...ಪ್ರೇಮಲೋಕದಲ್ಲಿ' ಚಿತ್ರದ ಮೂಲಕ ಮನೋರಂಜನ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಬೇಕಿತ್ತು. ಆದ್ರೆ, ರಿಯಾಲಿಟಿ ಶೋ, ನಟನೆ ಮತ್ತು 'ಅಪೂರ್ವ' ಚಿತ್ರದಲ್ಲಿ ರವಿಚಂದ್ರನ್ ಬಿಜಿಯಾಗಿರುವ ಕಾರಣ 'ರಣಧೀರ...ಪ್ರೇಮಲೋಕದಲ್ಲಿ' ನಿಂತಲ್ಲೇ ನಿಂತಿದೆ.