Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಡಯಾನ ಹೌಸ್' ನಂತರ 'ಕಿಷ್ಕಿಂಧೆ' ಆರಂಭಿಸಿದ ಭರತ್ ನಂದಾ
ಕಳೆದ ವರ್ಷ 'ಡಯಾನ ಹೌಸ್' ಎಂಬ ಹಾರರ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಗಮನ ಸೆಳೆದಿದ್ದ ನಿರ್ದೇಶಕ ಭರತ್ ನಂದಾ ಈಗ ಮತ್ತೊಂದು ವಿಭಿನ್ನ ಚಿತ್ರವನ್ನ ಕೈಗೆತ್ತಿಕೊಂಡಿದ್ದಾರೆ.
ಮೊದಲ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಅಷ್ಟಾಗಿ ಸದ್ದು ಮಾಡಲಿಲ್ಲ. ಆದ್ರೆ, ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿಕೊಳ್ಳುವಲ್ಲಿ ಯಶಸ್ಸು ಕಂಡಿತ್ತು. ಅದೇ ವಿಶ್ವಾಸದಿಂದ ಹೊಸ ಚಿತ್ರವನ್ನ ಆರಂಭಿಸಿದ್ದಾರೆ. ಈ ಚಿತ್ರದ ಹೆಸರು 'ಕಿಷ್ಕಿಂಧೆ'.
ಉತ್ತರವೇ ಸಿಗದ ಪ್ರಶ್ನೆಯಾಗಿಯೇ ಉಳಿದಿರುವ ಸ್ಟಾರ್ ನಟರ ವಿಷ್ಯಗಳು.!
ಇತ್ತೀಚಿಗಷ್ಟೆ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ನ್ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅನಾವರಣಗೊಳಿಸಿ, ಚಿತ್ರತಂಡಕ್ಕೆ ಶುಭಕೋರಿದ್ದರು. 'ನನಗೆ ಆಂಜನೇಯನ ಸಿನಿಮಾಗಳು ಅಂದ್ರೆ ತುಂಬಾ ಇಷ್ಟ. ಇದು ಕೂಡ ಅದೇ ಹೆಸರಿನ ಸಿನಿಮಾ. ಒಳ್ಳೆಯದಾಗಲಿ, ಬೇಗ ತೆರೆಮೇಲೆ ಬರಲಿ' ಎಂದು ಶಿವಣ್ಣ ಸಂತಸ ವ್ಯಕ್ತಪಡಿಸಿದರು.
ಸಹ ನಟನ ಮೇಲೆ ದರ್ಶನ್ ಹಲ್ಲೆ ಮಾಡಿದ್ದು ನಿಜಾನಾ.? ಬಿ ಸುರೇಶ್ ಏನಂದ್ರು.?
ಅಂದ್ಹಾಗೆ, 'ಕಿಷ್ಕಿಂಧೆ' ಐವರು ಸ್ನೇಹಿತರ ನಡುವೆ ನಡೆಯುವ ಕಥೆಯಾಗಿದೆ. ಐವರು ಮಾಡುವ ಕಪಿಚೇಷ್ಟೆಗಳ ಸುತ್ತಾ ಚಿತ್ರಕಥೆಯನ್ನ ಮಾಡಲಾಗಿದ್ದು, ತುಂಬಾ ಮನರಂಜನೆಯಿಂದ ಕೂಡಿದೆಯಂತೆ.
ಮಾರುತಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಸೋಮಶೇಖರ್ ಎಂಬುವವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಸಹ ನಿರ್ಮಾಪಕರಾಗಿ ಕೃಷ್ಣ ಕೆಲಸ ಮಾಡಲಿದ್ದಾರೆ. ಇನ್ನುಳಿದಂತೆ ಚಿತ್ರದ ಕಲಾವಿದರು ಹಾಗೂ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಮಾಹಿತಿಯನ್ನ ಸದ್ಯದಲ್ಲೇ ಬಹಿರಂಗಪಡಿಸಲಿದ್ದಾರಂತೆ.