Don't Miss!
- News Lok Sabha Election Survey: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ಗೆ ಆಘಾತ ನೀಡಿದ ಮತ್ತೊಂದು ಸಮೀಕ್ಷೆ!
- Finance ಟರ್ಮ್ ಇನ್ಶೂರೆನ್ಸ್ ಖರೀದಿಸುವಾಗ ಈ 5 ವಿಷಯ ಅರಿತುಕೊಳ್ಳಿ
- Technology Oppo: ಒಪ್ಪೋ A3 ಪ್ರೊ ಸ್ಮಾರ್ಟ್ಫೋನ್ ಲಾಂಚ್! 67W ಫಾಸ್ಟ್ ಚಾರ್ಜಿಂಗ್ ಸೌಲಭ್ಯ... ಬೆಲೆ ಎಷ್ಟು?
- Sports RCB vs SRH ಪಂದ್ಯದಿಂದ ನಾನೇ ಹಿಂದೆ ಸರಿದೆ ಎಂದ ಗ್ಲೆನ್ ಮ್ಯಾಕ್ಸ್ವೆಲ್; ಕಾರಣವೇನು?
- Automobiles ಹಣದ ವಿಚಾರವಾಗಿ ಜಗಳ: ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಕಾರಿಗೆ ಬೆಂಕಿಯಿಟ್ಟ ಸ್ನೇಹಿತರು
- Lifestyle ಒಂದೇ ಒಂದು ಟೊಮೆಟೋ ಇಲ್ಲದೆ ಈ ಚಟ್ನಿ ಮಾಡಿ..! ಸಿಕ್ಕಾಪಟ್ಟೆ ರುಚಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎಂ ಭೇಟಿ ಮಾಡಿದ ನಟಿ ಭಾರತಿ ವಿಷ್ಣುವರ್ಧನ್
ದಿವಂಗತ ಡಾ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ವಿಚಾರವಾಗಿ ಇಂದು (ಜೂನ್ 5) ನಟಿ ಭಾರತಿ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿದ ಭಾರತಿ ಅವರು ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡುವುದರ ಕುರಿತು ಮಾತನಾಡಿದ್ದಾರೆ.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಭಾರತಿ ಅವರು ''ಮುಖ್ಯಮಂತ್ರಿಗಳು ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಇರುವ ಕಾರಣ ಮುಂದಿನ ವಾರ ನಿಮ್ಮನ್ನ ಕರೆಸಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ'' ಎಂದು ತಿಳಿಸಿದ್ದಾರೆ.
ಅಭಿಮಾನ್ ಸ್ಟುಡಿಯೋದಲ್ಲಿ ಡಾ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಲಿ ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಜಾಗದ ವಿವಾದದಿಂದ ಬೇಸರಗೊಂಡಿರುವ ಭಾರತಿ ಅವರು ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದ್ರೀಗ, ಅಭಿಮಾನಿಗಳು, ಅಭಿಮಾನ್ ಸ್ಟುಡಿಯೋ ಮಾಲೀಕರು ಹಾಗೂ ಭಾರತಿ ಅವರ ಮಧ್ಯೆ ಒಮ್ಮತ ನಿರ್ಧಾರವಿಲ್ಲದ ಕಾರಣ ಸ್ಮಾರಕ ವಿಳಂಬವಾಗಿದೆ.
ಈ ಸಮಸ್ಯೆಯನ್ನ ಬಗೆಹರಿಸಿ ಸ್ಮಾರಕ ನಿರ್ಮಾಣ ಮಾಡಲು ಯಾವ ಸರ್ಕಾರಕ್ಕೂ ಸಾಧ್ಯವಾಗಿಲ್ಲ. 2009ರಲ್ಲಿ ವಿಷ್ಣುವರ್ಧನ್ ಅವರು ನಿಧನರಾಗಿದ್ದರು. ಇಲ್ಲಿಯವರೆಗೂ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಈಗ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾರೆ.
ಈಗಲಾದರೂ ಈ ಸಮಸ್ಯೆ ಬಗೆಹರಿಸಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗುತ್ತಾ ಎಂಬುದು ಕಾದುನೋಡಬೇಕಿದೆ.