Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುತ್ಥಳಿ ಧ್ವಂಸ ಅವಮಾನವಲ್ಲ, ಆರ್ಶಿವಾದ ಅಂದುಕೊಳ್ಳೋಣ; ನಟಿ ಭಾರತಿ ವಿಷ್ಣುವರ್ಧನ್
ಇಂದು ಸಾಹಸಿಂಹ ವಿಷ್ಣುವರ್ಧನ್ ಅವರ 11ನೇ ಪುಣ್ಯಸ್ಮರಣೆ. ಅಭಿಮಾನಿಗಳು ಮತ್ತು ಗಣ್ಯರು ಹೃದಯವಂತನನ್ನು ಸ್ಮರಿಸುತ್ತಿದ್ದಾರೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸಮಾಧಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.
Recommended Video
ಸದ್ಯ ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇಂದು ಭಾರತಿ ವಿಷ್ಣುವರ್ಧನ್ ಸೇರಿದಂತೆ ಇಡೀ ಕುಟುಂಬ ಭೇಟಿ ನೀಡಿ, ವಿಷ್ಣುವರ್ಧನ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ಇದೇ ಸಮಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ನಟಿ ಭಾರತಿ ವಿಷ್ಣುವರ್ಧನ್, ವಿಷ್ಣುವರ್ಧನ್ ಸ್ಮಾರಕ ಧ್ವಂಸದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇವರ ಮೇಲಿನ ಅಭಿಮಾನ, ಪ್ರೀತಿ ಎಂದು ಕಮ್ಮಿಯಾಗಿಲ್ಲ; ನಟ ದರ್ಶನ್
'ವಿಷ್ಣುವರ್ಧನ್ ಬಗ್ಗೆ ಮಾತನಾಡುವವರು ಇರಬೇಕು. ಹಾಗಿದ್ದಲ್ಲಿ ಮಾತ್ರ ಅವರ ಇರುವಿಕೆ ಗೊತ್ತಾಗುತ್ತೆ. ಮೊನ್ನೆಯ ಘಟನೆಗೆ ಇಡೀ ಚಿತ್ರರಂಗ ಪ್ರತಿಕ್ರಿಯೆಸಿದೆ. ಘಟನೆಗೆ ಪ್ರತಿಕ್ರಿಯಿಸಿದ ಎಲ್ಲರಿಗು ಧನ್ಯವಾದಗಳು. ಎಲ್ಲರ ಮನದಲ್ಲು ವಿಷ್ಣು ಇದ್ದಾರೆ' ಎಂದಿದ್ದಾರೆ.
ಇನ್ನು, 'ಯಾರೋ ಕೆಲವರು ಅವರ ಬಗ್ಗೆ ಮಾತನಾಡುತ್ತಾರೆ. ಮಾತನಾಡುವವರು ಇದ್ದಾಗಲೇ ನಮ್ಮವರು ಇದ್ದಾರೆ ಅನಿಸೋದು. ಪುತ್ಥಳಿ ಧ್ವಂಸವನ್ನ ಅವಮಾನ ಅಂದುಕೊಳ್ಳಬಾರದು. ಅದನ್ನ ಆರ್ಶಿವಾದ ಅಂದುಕೊಳ್ಳೋಣ. ಅಂತವರಿಗೆ ನಾನು ಏನು ಹೇಳೋದು ಇಲ್ಲ. ಅಂತವರ ಬಗ್ಗೆ ಏನು ಹೇಳೋದೆ ಇರೋದೆ ಉತ್ತಮ' ಎಂದು ಭಾರತಿ ಪ್ರತಿಕ್ರಿಯಿಸಿದ್ದಾರೆ.
ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಬಾಲಗಂಗಾಧರ ಸ್ವಾಮಿಜಿ ವೃತ್ತದಲ್ಲಿ ಇದ್ದ ದಿವಂಗತ ಡಾ. ವಿಷ್ಣುವರ್ದನ್ ಸ್ಮಾರಕರವನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಸ್ಯಾಂಡಲ್ ವುಡ್ ಯಜಮಾನನ ಪ್ರತಿಮೆ ಧ್ವಂಸ ಮಾಡಿದ್ದವರ ವಿರುದ್ಧ ದರ್ಶನ್, ಸುದೀಪ್ ಸೇರಿದಂತೆ ಅನೇಕರು ಕಿಡಿಕಾರಿದ್ದರು. ಇದೀಗ ಅದೇ ವೃತ್ತದಲ್ಲಿ ಮತ್ತೆ ವಿಷ್ಣುದಾದಾನ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ.