Don't Miss!
- Lifestyle
Horoscope Today 22 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Sports
ನೆಟ್ಸ್ನಲ್ಲಿ ಬೌಲಿಂಗ್ ಆರಂಭಿಸಿದ ಬುಮ್ರಾ : ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಆಯ್ಕೆ?
- News
ಮಕ್ಕಳಾಗಲು ಮಾನವನ ಮೂಳೆ ಪೌಡರ್ ತಿನ್ನುವಂತೆ ಒತ್ತಾಯ, ಪ್ರಕರಣ ದಾಖಲು
- Automobiles
ಮತ್ತಷ್ಟು ತಡವಾಗಲಿದೆ ಹೊಸ ಹ್ಯುಂಡೈ ಕ್ರೆಟಾ ಫೇಸ್ಲಿಫ್ಟ್ ಎಸ್ಯುವಿ ಬಿಡುಗಡೆ
- Finance
NRI PAN Card: ಎನ್ಆರ್ಐ ಪ್ಯಾನ್ ಕಾರ್ಡ್ಗೆ ಆನ್ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
- Technology
2023ರಲ್ಲಿ ಸ್ಮಾರ್ಟ್ಫೋನ್ ಖರೀದಿಸುವ ಮುನ್ನ ನೀವು ಗಮನಿಸಲೇಬೇಕಾದ ವಿಚಾರಗಳು!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕರ್ನಾಟಕದ ನೆರವಿಗೆ ನಿಂತ ಭೂಮಿ ಪಡ್ನೇಕರ್ ಮತ್ತು ಕಪಿಲ್ ಶರ್ಮ
ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಅನೇಕ ಸಿನಿ ಸೆಲೆಬ್ರಿಟಿಗಳು ನೆರವಿಗೆ ಧಾವಿಸಿದ್ದಾರೆ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಆಹಾರ ಸೇರಿದಂತೆ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಇದೀಗ ಬಾಲಿವುಡ್ ನಟಿ ಭೂಮಿ ಪಡ್ನೇಕರ್ ಮತ್ತು ಕಾಮಿಡಿ ಸ್ಟಾರ್ ಕಪಿಲ್ ಶರ್ಮಾ ಒಟ್ಟಾಗಿ ಕರ್ನಾಟಕದ ನೆರವಿಗೆ ಧಾವಿಸಿದ್ದಾರೆ.
ಈಗಾಗಲೇ ದೇಶದಾದ್ಯಂತ ಕೊರೊನಾ ರೋಗಿಗಳ ಸಹಾಯ ನಿಂತಿರುವ ಭೂಮಿ ಮತ್ತು ಕಪಿಲ್ ಈಗ ಕರ್ನಾಟಕದ ಕಡೆ ಧಾವಿಸಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡುತ್ತಿರುವ ಕರ್ನಾಟಕದ ರೋಗಿಗಳ ನೆರವಿಗೆ ಬಂದಿದ್ದಾರೆ. ಇಬ್ಬರು ಶ್ರೀ ರವಿಶಂಕರ್ ಅವರ ಮಿಷನ್ ಜಿಂದಗಿ ಯೊಂದಿಗೆ ಕೈ ಜೋಡಿಸಿದ್ದು ಕರ್ನಾಟಕದ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಳ ಸೇರಿದಂತೆ ಇನ್ನು ಕೆಲವು ಆಸ್ಪತ್ರೆಗಳಿಗೆ ಅಕ್ಸಿಜನ್ ಬಸ್ ಗಳನ್ನು ಕಳುಹಿಸಿದ್ದಾರೆ.
ಬೆಂಗಳೂರಿನಲ್ಲಿ
ಸೋನು
ಸೂದ್
ಸೇವೆ:
5
ಸಾವಿರ
ಜನರಿಗೆ
ಆಹಾರ
ವಿತರಣೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ ಭೂಮಿ ಪಡ್ನೇಕರ್, 'ಮಾರಕ ಕೊರೊನಾ ಎರಡನೇ ಅಲೆ ಭಾರತದ ಹಳ್ಳಿಗಳಿಗೆ ನುಗ್ಗಿದೆ. ನೆರವು ಕೇವಲ ನಗರಗಳಿಗೆ ಸೀಮಿತವಾಗಬಾರದು. ಸಣ್ಣ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಅನೇಕ ಪ್ರಕರಣಗಳು ದಾಖಲಾಗುತ್ತಿದೆ. ಈ ಸಮಯದಲ್ಲಿ ಆಮ್ಲಜನಕ ಒದಗಿಸುವುದು ಅವಶ್ಯಕವಾಗಿದೆ. ನಾವು ಗ್ರಾಮೀಣ ಭಾರತದತ್ತ ನಮ್ಮ ಗಮನವನ್ನು ಕೇಂದ್ರೀಕರಿಸುತ್ತಿದ್ದೇವೆ ಮತ್ತು ಕರ್ನಾಟಕದ ಕೆಲವು ಜಿಲ್ಲೆಗಳೊಂದಿಗೆ ಪ್ರಾರಂಭಿಸುತ್ತಿದ್ದೇವೆ' ಎಂದಿದ್ದಾರೆ.
'ಬಸ್ ನಲ್ಲಿ ಆಮ್ಲಜನಕ ಸಾಂದ್ರಕವನ್ನು ಅಳವಿಸಿದ್ದೇವೆ. ಜಿಲ್ಲೆಯ ಆಸ್ಪತ್ರೆಗಳಲ್ಲಿ ರೋಗಿಗಳು ಆಸ್ಪತ್ರೆಯ ಬೆಡ್ ಗಾಗಿ ಹೊರಗೆ ಕಾಯುತ್ತಿರುವ ಸಂದರ್ಭದಲ್ಲಿ ನಮ್ಮ ಆಕ್ಸಿಜನ್ ಒದಗಿಸಲಾಗುತ್ತದೆ. ಪ್ರಕರಣಗಳು ಹೆಚ್ಚುತ್ತಿರುವ ಸಣ್ಣ ಪಟ್ಟಣಗಳಲ್ಲಿ ಆಸ್ಪತ್ರೆಯ ಭಾರ ಹಂಚಿಕೊಳ್ಳಲು ನಮ್ಮ ಬಸ್ ಸಹಾಯ ಮಾಡುತ್ತವೆ. ಕಪಿಲ್ ಜೊತೆ ನಾವು ಕೂಡ ಕೈ ಜೋಡಿಸಿದ್ದೇವೆ' ಎಂದಿದ್ದಾರೆ.
Recommended Video
ಸದ್ಯ ಕರ್ನಾಟಕ ಜನರ ನೆರವಿಗೆ ನಿಂತಿದ್ದಾರೆ. ಈ ಸೇವೆ ಎಲ್ಲಾ ರಾಜ್ಯಗಳಿಗೂ ಮುಂದು ವರೆಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಭೂಮಿ ಪಡ್ನೇಕರ್ ಹೇಳಿದ್ದಾರೆ.