Don't Miss!
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- News ಎನ್ಡಿಎ ಸೇರಿದ ಪ್ರಫುಲ್ ಪಟೇಲ್ ಮೇಲಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಿಬಿಐ ಎಳ್ಳುನೀರು!
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭುವನ್ ಮೇಲೆ ಪ್ರಥಮ್ ಹಲ್ಲೆ: ದೂರು ದಾಖಲು
ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ 4'ನ ಸ್ಫರ್ಧಿಗಳಾದ ಪ್ರಥಮ್ ಮತ್ತು ಭುವನ್ ಅವರ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣ ವೇಳೆ ಗಲಾಟೆ ನಡೆದಿದೆ. ಈ ವೇಳೆ ಪ್ರಥಮ್ ರವರು ನನ್ನ ಕಾಲು ಕಚ್ಚಿದ್ದಾರೆ ಎಂದು ಆರೋಪಿಸಿ ಭುವನ್ ರವರು ತಲಘಟ್ಟಪುರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಿಗ್ ಬಾಸ್ ಪ್ರಥಮ್ ಮತ್ತು ಭುವನ್ ನಡುವೆ ಗಲಾಟೆ..!
'ಬಿಗ್ ಬಾಸ್ ಕನ್ನಡ 4' ಖ್ಯಾತಿಯ ಭುವನ್, ಪ್ರಥಮ್ ಮತ್ತು ಸಂಜನಾ ಮೂವರು ಖಾಸಗಿ ವಾಹಿನಿಯೊಂದರ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಹಲವು ದಿನಗಳಿಂದ ಕಿರುತೆರೆಯಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದೆ. ನಿನ್ನೆ ಇದೇ ಧಾರಾವಾಹಿ ಚಿತ್ರೀಕರಣ ವೇಳೆ ಪ್ರಥಮ್ ಮತ್ತು ಸಂಜನಾ ನಡುವೆ ಒಂದು ದೃಶ್ಯದ ಶೂಟ್ ನಡೆಯಬೇಕಿತ್ತು. ಆದರೆ ಈ ದೃಶ್ಯದಲ್ಲಿ ಪ್ರಥಮ್ ಜೊತೆ ನಟಿಸಲು ಸಂಜನಾ ಒಪ್ಪಿರಲಿಲ್ಲವಂತೆ. ಅದಕ್ಕೆ ಪ್ರಥಮ್ ರವರು ಭುವನ್ ಜೊತೆ ಮಾತ್ರ ನಟಿಸುತ್ತೀಯ ನನ್ನ ಜೊತೆ ಏಕೆ ನಟಿಸುವುದಿಲ್ಲ ಎಂದು ಕೇಳುತ್ತಿರುವಾಗ ಭುವನ್ ಮಧ್ಯ ಪ್ರವೇಶಿಸಿದರಂತೆ. ಈ ವೇಳೆ ಪ್ರಥಮ್ ಮತ್ತು ಭುವನ್ ನಡುವಿನ ಮಾತಿನ ಚಕಮಕಿ ಜಗಳಕ್ಕೆ ತಿರುಗಿ ಇಬ್ಬರು ಪರಸ್ಪರ ನೂಕಾಟ ನಡೆಸಿದರಂತೆ. ಈ ಹಿನ್ನೆಲೆಯಲ್ಲಿ ಈಗ ಭುವನ್ ರವರು ಪ್ರಥಮ್ ಕಾಲು ಕಚ್ಚಿದ್ದಾರೆ ಎಂದು ಆರೋಪಿಸಿ ತಲಘಟ್ಟಪುರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಥಮ್ ರಿಂದ ಕಾಲು ಕಚ್ಚಿಸಿಕೊಂಡ ಭುವನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದಾರಂತೆ.