Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೀಕರಣ ವೇಳೆ ಅವಘಡ: ನಟ ಭುವನ್ ಮುಖಕ್ಕೆ ಗಾಯ
ಬಿಗ್ ಬಾಸ್ ಖ್ಯಾತಿಯ ನಟ ಭುವನ್ ಪೊನ್ನಣ್ಣ ಅಭಿನಯಿಸುತ್ತಿರುವ 'ರಾಂಧವ' ಚಿತ್ರದ ಸಾಹಸ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ನಟ ಭುವನ್ ಗೆ ಮುಖಕ್ಕೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಹೆಸರಘಟ್ಟದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಸಸ್ಟಂಟ್ ದೃಶ್ಯವನ್ನ ಯಾವುದೇ ರೋಪ್ ಇಲ್ಲದೇ ಚಿತ್ರೀಕರಣ ಮಾಡಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ.
ಓಡಿ ಬಂದ ಭುವನ್ ಕಾಲು ಜಾರಿದ್ದರಿಂದ ಆಯತಪ್ಪಿ ಬಿದ್ದಿದ್ದಾರೆ. ಸೊಂಟ, ಕಾಲು ಮತ್ತು ಮೂಗಿಗೆ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.
'ಬಿಗ್ ಬಾಸ್' ನಂತರ ಭುವನ್ ರಿಜೆಕ್ಟ್ ಮಾಡಿದ ಕಥೆಗಳೆಷ್ಟು?
ಅಂದ್ಹಾಗೆ, ಈ ಚಿತ್ರಕ್ಕೆ ಸುನೀಲ್ ಎಸ್. ಆಚಾರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದು ಮೂರು ತಲೆಮಾರುಗಳ ಕಥೆಯಾಗಿದ್ದು, ಆಕ್ಷನ್, ಥ್ರಿಲ್ಲರ್, ಸಸ್ಪೆನ್ಸ್ ಹಾಗೂ ಪ್ರೇಮಕಥೆ ಎಲ್ಲವೂ ಈ ಚಿತ್ರದಲ್ಲಿದೆ. ಶೇ.20ರಷ್ಟು ಕಂಪ್ಯೂಟರ್ ಗ್ರಾಫಿಕ್ಸ್ ಬಳಸಲಾಗುತ್ತಿದೆಯಂತೆ.
ಚಿತ್ರದಲ್ಲಿ ಭುವನ್ ಗೆ ಇಬ್ಬರು ನಾಯಕಿಯರು ಇರಲಿದ್ದಾರೆ. ಒಬ್ಬರು ಶ್ರೀಯಾ ಅಂಚನ್ ನೃತ್ಯಗಾರ್ತಿಯಾಗಿ ನಟಿಸಲಿದ್ದಾರೆ. ಇನ್ನೊಬ್ಬ ನಾಯಕಿ ಇನ್ನೂ ಅಂತಿಮವಾಗಿಲ್ಲ. ಇನ್ನುಳಿದಂತೆ ಜಹಾಂಗೀರ್, ಲಕ್ಷೀ ಹೆಗಡೆ, ಪ್ರದೀಪ್, ದಯಾನಂದ, ಕುರಿಪ್ರತಾಪ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಗಾಯಕನಾಗಿ ಗುರ್ತಿಸಿಕೊಂಡಿರುವ ಶಶಾಂಕ್ ಶೇಷಗಿರಿ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ರಾಜಶಿವಶಂಕರ ಛಾಯಾಗ್ರಹಣ ರಾಂಧವನಿಗಿದೆ.
ಯಪ್ಪಾ.... 'ಬಿಗ್ ಬಾಸ್' ಭುವನ್ ಗೆ ಸಿಕ್ಕಿರುವ ಹೊಸ ಟೈಟಲ್ ಕೇಳಿದ್ರಾ?