Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಚ್ಚುಗತ್ತಿ' ಹಿಡಿದು ಬಂದ ಡಿಂಗ್ರಿ ನಾಗರಾಜ್ ಪುತ್ರ
'ಬಿಚ್ಚುಗತ್ತಿ' ಸಿನಿಮಾ ಈಗಾಗಲೇ ಸ್ಯಾಂಡಲ್ ವುಡ್ ಸಿನಿಮಾಭಿಮಾನಿಗಳ ಗಮನ ಸೆಳೆದಿದೆ. ಇದೀಗ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ.
'ಬಿಚ್ಚುಗತ್ತಿ' ಒಂದು ಐತಿಹಾಸಿಕ ಸಿನಿಮಾ. ಬಿ ಎಲ್ ವೇಣು ಅವರು ಬರೆದಿರುವ ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕ ಕಾದಂಬರಿ ಆಧಾರಿತವಾಗಿ ಚಿತ್ರ ಇದಾಗಿದೆ. 'ವಿಕ್ಟರಿ 2' ಬಳಿಕ ಹರಿ ಸಂತೋಷ್ ಈ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಬಾರಿಗೆ ಅವರು ಐತಿಹಾಸಿಕ ಚಿತ್ರಕ್ಕೆ ಕೈ ಹಾಕಿದ್ದಾರೆ.
'ಯಜಮಾನ'ನ ಹುಟ್ಟುಹಬ್ಬಕ್ಕೆ ಸ್ಟಾರ್ ಗಳ ಶುಭಾಶಯ, ಯಾರ್ಯಾರ ವಿಶ್ ಹೇಗಿತ್ತು?
ಹಿರಿಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ಚಿತ್ರದ ನಾಯಕನಾಗಿದ್ದಾರೆ. ಚಿತ್ರದ ಫಸ್ಟ್ ಲುಕ್ ನಲ್ಲಿ ಅವರು ತುಂಬ ಚೆನ್ನಾಗಿ ಕಾಣಿಸಿಕೊಂಡಿದ್ದಾರೆ. ಐತಿಹಾಸಿಕ ಪಾತ್ರದ ಮೂಲಕ ದೊಡ್ಡ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ.
ಹರಿಪ್ರಿಯಾ ಚಿತ್ರದ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಬೇರೆ ಬೇರೆ ರೀತಿಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಹರಿಪ್ರಿಯಾ ಇಲ್ಲಿಯೂ ಮಿಂಚಲು ಸಜ್ಜಾಗಿದ್ದಾರೆ.
ಈ ಸಿನಿಮಾ ಎರಡು ಪಾರ್ಟ್ ಗಳಲ್ಲಿ ಬರಲಿದೆ. ಚಾಪ್ಟರ್ 1 ದಳವಾಯಿ ದಂಗೆಯ ಕಥೆ ಹೇಳುತ್ತದೆ. ಹಂಸಲೇಖ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.