Don't Miss!
- News Lok Sabha Election 2024: ಮತದಾನ ಮಾಡಿದವರಿಗೆ ಬೆಂಗಳೂರಿನ ಈ ಹೋಟೆಲ್ಗಳಲ್ಲಿ ಊಚಿತ ಊಟ & ತಿಂಡಿ-ಮಾಹಿತಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ಸೂಪರ್ ಸ್ಟಾರ್ ಚಿರಂಜೀವಿಗೆ ಷಷ್ಟ್ಯಬ್ದಿ ಸಂಭ್ರಮ
ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರು ನಾಳೆ (ಆಗಸ್ಟ್ 22) 60ರ ಸಂವತ್ಸರಕ್ಕೆ ಕಾಲಿಡುತ್ತಿದ್ದು, ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ಮೆಗಾಸ್ಟಾರ್ ಪುತ್ರ ರಾಮ್ ಚರಣ್ ನಿರ್ಧರಿಸಿದ್ದಾರೆ.
ಅಂದಹಾಗೆ ಮೆಗಾಸ್ಟಾರ್ ಚಿರಂಜೀವಿ ಅವರು ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 35 ವರ್ಷಗಳು ತುಂಬಿದ್ದು, ಒಟ್ನಲ್ಲಿ ಮೆಗಾಸ್ಟಾರ್ ಫ್ಯಾಮಿಲಿಗೆ ಡಬಲ್ ಧಮಾಕಾ ಜೊತೆಗೆ ಹಬ್ಬದ ವಾತಾವರಣ.
ಇದೀಗ ಮೆಗಾಸ್ಟಾರ್ ಹುಟ್ಟುಹಬ್ಬಕ್ಕೆ ಚಿರು ಪುತ್ರ ರಾಮ್ ಚರಣ್ ಅವರು ಸರ್ಪ್ರೈಜ್ ಆಗಿ ಹುಟ್ಟುಹಬ್ಬದ ಸಮಾರಂಭವನ್ನು ಹೈದಾರಾಬಾದ್ ನ ಪಂಚತಾರಾ ಹೋಟೆಲ್ ಒಂದರಲ್ಲಿ ಏರ್ಪಡಿಸಿದ್ದಾರೆ. [ಚಿರಂಜೀವಿ ಪುತ್ರನ ಹೊಸ ಸಾಹಸ, ಗಗನದಲ್ಲಿ ಹಾರಾಟ]
ಈ ಸರ್ಪ್ರೈಜ್ ಬರ್ತ್ ಡೇ ಪಾರ್ಟಿಗೆ ಬಾಲಿವುಡ್ ನ ಖ್ಯಾತ ಸ್ಟಾರ್ ಗಳಿಗೂ ಆಹ್ವಾನ ಹೋಗಿದ್ದು, ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ಅಮೀರ್ ಖಾನ್ ಸಮಾರಂಭಕ್ಕೆ ಬರುವುದಾಗಿ ತಿಳಿಸಿದ್ದಾರೆ.
ಮೆಗಾಸ್ಟಾರ್ ಚಿರು ಫ್ಯಾಮಿಲಿ ಬಿಗ್ ಬಿ ಫ್ಯಾಮಿಲಿಗೆ ತುಂಬಾ ಹತ್ತಿರದ ಗೆಳೆಯರಾಗಿದ್ದು, ಚಿರು ಪುತ್ರ ರಾಮ್ ಚರಣ್ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ವಿಶೇಷ ಆಹ್ವಾನವಿತ್ತಿದ್ದಾರೆ. [ತೆರೆಯ ಮೇಲೆ ಚಿರಂಜೀವಿ ಮತ್ತೆ ತಿಲ್ಲಾನ ತಿಲ್ಲಾನ]
ಇನ್ನೂ ಚಿರಂಜೀವಿ ಅವರಿಗೂ ಕನ್ನಡ ಚಿತ್ರರಂಗಕ್ಕೂ ಸ್ವಲ್ಪ ಮಟ್ಟಿನ ಸಂಬಂಧವಿದೆ ಅಂದರೂ ತಪ್ಪಾಗ್ಲಿಕ್ಕಿಲ್ಲ. ಯಾಕಂದ್ರೆ ಕನ್ನಡದ ಕ್ರೇಜಿಸ್ಟಾರ್ ರವಿಚಂದ್ರ ಅವರ ಜೊತೆ 'ಸಿಪಾಯಿ' ಚಿತ್ರದಲ್ಲಿ ಗೆಳೆಯನ ಪಾತ್ರ ವಹಿಸಿ ಚಂದನವನಕ್ಕೂ ಕಾಲಿಟ್ಟಿದ್ದರು. [ಕಾಂಗ್ರೆಸ್ ಗೆದ್ದರೆ ಮಾತ್ರ ಕರ್ನಾಟಕಕ್ಕೆ ಮತ್ತೆ ಕಾಲಿಡುವೆ]
ಈಗಾಗಲೇ ಚಿರು ಅಭಿಮಾನಿಗಳು ಹುಟ್ಟು ಹಬ್ಬವನ್ನು ಆಚರಿಸಲು ಶುರು ಹಚ್ಚಿಕೊಂಡಿದ್ದಾರೆ. ಇನ್ನೂ ಮೆಗಾಸ್ಟಾರ್ ಫ್ಯಾಮಿಲಿ ಹಾಗೂ ಹತ್ತಿರದ ಸಂಬಂಧಿಗಳು ಯಾವ ರೀತಿಯಲ್ಲಿ ಜನುಮದಿನದ ಸಮಾರಂಭವನ್ನು ಆಚರಿಸಲಿದ್ದಾರೆ ಅನ್ನೋದನ್ನ ನೋಡಬೇಕಿದೆ.
ಹುಟ್ಟುಹಬ್ಬ ಸಮಾರಂಭದಲ್ಲಿ ಖ್ಯಾತ ತೆಲುಗು ತಾರೆಗಳಾದ ವಿಕ್ಟರಿ ವೆಂಕಟೇಶ್, ನಾಗಾರ್ಜುನ್, ಮತ್ತು ಜಗಪತಿಬಾಬು ಕೂಡ ಭಾಗವಹಿಸಲಿದ್ದಾರೆ. ಚಿರಂಜೀವಿ ತಮ್ಮ ಪವನ್ ಕಲ್ಯಾಣ್ ಅವರು 'ಸರ್ದಾರ್ ಗಬ್ಬರ್ ಸಿಂಗ್' ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.