Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಮೀರಾಚಾರ್ಯ- ಕಿಚ್ಚನ ಭೇಟಿ ಹಿಂದೆ ಇಂಟ್ರೆಸ್ಟಿಂಗ್ ವಿಚಾರ
Recommended Video
ಸಮೀರ್ ಆಚಾರ್ಯ.. ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡವರು. ಬಿಗ್ ಬಾಸ್ ಮುಗಿಸಿದ ನಂತರ ಟಿವಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಸಮೀರ್ ಆಚಾರ್ಯ ಈಗ ಏನು ಮಾಡುತ್ತಿದ್ದಾರೆ ಎನ್ನುವ ವಿಚಾರ ತಿಳಿದುಕೊಳ್ಳುವ ಗೋಜಿಗೆ ಯಾರು ಹೋಗಿಲ್ಲ.
ಆದರೆ ಸುದೀಪ್ ಹಾಗೂ ಸಮೀರ್ ಆಚಾರ್ಯ ಮತ್ತು ಪತ್ನಿ ವಿಮಾನದಲ್ಲಿ ಕುಳಿತಿರುವ ಫೋಟೋ ಮಾತ್ರ ಎಲ್ಲೆಡೆ ವೈರಲ್ ಆಗ್ತಿದೆ. ಇತ್ತೀಚಿಗಷ್ಟೆ ಸುದೀಪ್ ಅವರನ್ನು ಸಮೀರ್ ಆಚಾರ್ಯ ದಂಪತಿ ಭೇಟಿ ಮಾಡಿದ್ದಾರೆ. ಒಟ್ಟಿಗೆ ಪ್ರಯಾಣ ಮಾಡಿದ್ದಾರೆ.
ಮಗಳ ಸ್ನೇಹಿತೆಯ ಹಾಡಿಗೆ ಮನಸೋತ ಪ್ರಿಯಾ ಸುದೀಪ್
ಹಾಗಾದರೆ ಸುದೀಪ್ ಮತ್ತು ಸಮೀರ್ ಆಚಾರ್ಯ ಭೇಟಿ ಮಾಡಿದರ ಹಿಂದಿನ ಉದ್ದೇಶವೇನು? ಹೈದ್ರಾಬಾದ್ ನಲ್ಲಿ ಸಮೀರ್ ಆಚಾರ್ಯ ಏನು ಮಾಡುತ್ತಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ ಮುಂದೆ ಓದಿ
ಸಮೀರಾಚಾರ್ಯ -ಕಿಚ್ಚ ಸುದೀಪ್ ಭೇಟಿ
ನಟ ಕಿಚ್ಚ ಸುದೀಪ್ ಹಾಗೂ ಸಮೀರಾಚಾರ್ಯ ಇತ್ತೀಚಿಗಷ್ಟೆ ವಿಮಾನದಲ್ಲಿ ಆಕಸ್ಮಿಕವಾಗಿ ಭೇಟಿ ಮಾಡಿದ್ದಾರೆ. ಹೈದ್ರಾಬಾದ್ ಗೆ ಇಬ್ಬರೂ ಪ್ರಯಾಣ ಬೆಳೆಸುವಾಗ ಭೇಟಿ ಮಾಡಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಕಿಚ್ಚ ಸಮೀರ್ ಆಚಾರ್ಯ ಅವರ ಫ್ಯಾಮಿಲಿಯನ್ನು ಒಟ್ಟಿಗೆ ಕುಳಿತುಕೊಳ್ಳಲು ಹೇಳಿ ಪ್ರಯಾಣದ ಉದ್ದಕ್ಕೂ ಮಾತುಕತೆ ನಡೆಸಿದ್ದಾರೆ.
ಮಹದಾಯಿ ಹೋರಾಟಕ್ಕೆ ಸುದೀಪ್ ಸಾಥ್
ಇದೇ ವೇಳೆ ಸುದೀಪ್ ಅವರೊಂದಿಗೆ ಮಹದಾಯಿ ಹೋರಾಟಕ್ಕೆ ಬೆಂಬಲ ನೀಡುವಂತೆ ಸಮೀರ್ ಆಚಾರ್ಯ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಉತ್ತರವಾಗಿ ಸುದೀಪ್ ರೈತರಿಗೆ ಸದಾ ನಮ್ಮ ಬೆಂಬಲ ಇರಲಿದೆ ಎನ್ನುವುದನ್ನು ತಿಳಿಸಿದ್ದಾರೆ.
ಬಿಗ್ ಬಾಸ್ ಹಣದಿಂದ ಶಾಲೆ ಆರಂಭ
ಬಿಗ್ ಬಾಸ್ ನಲ್ಲಿ ಸದಾ ಹೇಳುತ್ತಿದ್ದ ಹಾಗೆಯೇ ಸಮೀರ್ ಆಚಾರ್ಯ ತಮ್ಮ ಊರಿನಲ್ಲಿ ಸ್ವಂತ ಎರಡು ಶಾಲೆಯನ್ನು ಆರಂಭ ಮಾಡಿದ್ದಾರೆ. ರೈತರ ಹಾಗೂ ಸೈನಿಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದಲೇ ಶಾಲೆ ಆರಂಭವಾಗಿದ್ದು ದೇಶದ ಯಾವುದೇ ಮಕ್ಕಳು ಓದಲು ಸಮಸ್ಯೆ ಆಗಿದ್ದಲ್ಲಿ ಅಂತವರನ್ನು ತಾವೇ ದತ್ತು ಸ್ವೀಕರಿಸಿ ಶಿಕ್ಷಣ ನೀಡಲಿದ್ದಾರೆ.
ಟಾಲಿವುಡ್ ನಲ್ಲಿ ಸಮೀರ್ ಆಚಾರ್ಯ
ಸಮೀರ್ ಆಚಾರ್ಯ ಸದ್ಯ ಟಾಲಿವುಡ್ ಕಿರುತೆರೆ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದು ಬಿಗ್ ಬಾಸ್ ಕಾರ್ಯಕ್ರಮದಿಂದ ಇಂದು ಸಾಕಷ್ಟು ಉಪಯೋಗವಾಗಿದೆ ಎನ್ನುತ್ತಾರೆ. ತಂದೆ, ತಾಯಿ ಹಾಗೂ ಹೆಂಡತಿ ಸಹಾಯದಿಂದ ಇಷ್ಟೆಲ್ಲಾ ಮಾಡಲು ಅವಕಾಶವಾಯ್ತು ಎನ್ನುವುದು ಸಮೀರ್ ಆಚಾರ್ಯ ಅಭಿಪ್ರಾಯ.