Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚನಿಗೆ 'ಮದುವೆಯ ಕರೆಯೋಲೆ' ನೀಡಲು ಅರಮನೆಗೆ ಬಂದ ಅಮೂಲ್ಯ
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ವೀಕ್ಷಕರಿಗೆ ಈ ವೀಕೆಂಡ್ ನಲ್ಲಿ ಡಬಲ್ ಧಮಾಕಾ.
ಅದೇನಂತೀರಾ?, ತೂಗುದೀಪ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಸಾಹಿತ್ಯ ಬರಹಗಾರ ಕವಿರಾಜ್ ಚೊಚ್ಚಲ ನಿರ್ದೇಶನದ 'ಮದುವೆಯ ಮಮತೆಯ ಕರೆಯೋಲೆ' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ಈ ವಾರ (ನವೆಂಬರ್ 29) ಭರ್ಜರಿಯಾಗಿ ನಡೆಯಲಿದೆ.[ಕುಂಬಳಕಾಯಿಯತ್ತ, 'ಮದುವೆಯ ಮಮತೆಯ ಕರೆಯೋಲೆ' ]
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಆಡಿಯೋ ಬಿಡುಗಡೆ ಮಾಡಲಿದ್ದಾರೆ. ನಟ-ನಿರೂಪಕ ಸೃಜನ್ ಲೋಕೇಶ್ ಅವರ 'ಮಜಾ ಟಾಕೀಸ್' ನಲ್ಲಿ ನಮ್ಮ ಸಿನಿಮಾ ಚಾಲನೆ ಪಡೆದುಕೊಂಡಿತ್ತು.
ಇದೀಗ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಬಿಗ್ ವೇದಿಕೆಯಲ್ಲಿ ಇದೇ ಮೊದಲ ಬಾರಿಗೆ ಆಡಿಯೋ ಬಿಡುಗಡೆ ನಡೆಯುತ್ತಿದೆ. ಇದು ಕಿಚ್ಚ ಸುದೀಪ್ ಅವರ ಐಡಿಯಾ ಮತ್ತು ಆಡಿಯೋ ಬಿಡುಗಡೆಗೆ ಇದೊಂದು ಒಳ್ಳೆ ವೇದಿಕೆ ಆದ್ದರಿಂದ ಒಪ್ಪಿಕೊಂಡೆವು ಎನ್ನುತ್ತಾರೆ ನಿರ್ಮಾಪಕ ದಿನಕರ್ ತೂಗುದೀಪ್.[ಬೇಬಿ ಡಾಲ್ ಅಮೂಲ್ಯಗೆ ಮದುವೆ ಆಯ್ತು.!]
ಈ ಒಂದು ಘಂಟೆಯ ಕಾರ್ಯಕ್ರಮದಲ್ಲಿ ಹಾಡುಗಳ ಕೆಲವು ದೃಶ್ಯಗಳನ್ನು ಬಿತ್ತರಿಸಲಾಗುವುದು ಹಾಗೆಯೇ ಚೊಚ್ಚಲ ನಾಯಕ ಸೂರಜ್ ಗೌಡ ಮತ್ತು ಅಮೂಲ್ಯ ಅವರ ನೃತ್ಯ ಕಾರ್ಯಕ್ರಮ ಜೊತೆಗೆ ವಿ.ಹರಿಕೃಷ್ಣ ಅವರ ಸಂಗೀತ ಕಾರ್ಯಕ್ರಮ ಕೂಡ ನಡೆಯಲಿದೆ. ಕಾರ್ಯಕ್ರಮದಲ್ಲಿ ಕನ್ನಡದ ಎವರ್ ಗ್ರೀನ್ ನಟ ಅನಂತ್ ನಾಗ್ ಭಾಗವಹಿಸಲಿದ್ದಾರೆ.[ಕಣ್ಣೀರು ಹಾಕಿಕೊಂಡು ಮನೆಯಿಂದ ಹೊರ ನಡೆದ ಮಳೆ ಹುಡುಗಿ]
ಸೋಮವಾರದಿಂದ ಹಾಡುಗಳು ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಗೀತೆ ರಚನೆಕಾರರಿಂದ ನಿರ್ದೇಶಕನಾಗಿ ಭಡ್ತಿ ಹೊಂದಿರುವ ಕವಿರಾಜ್ ಆಕ್ಷನ್-ಕಟ್ ಹೇಳಿರುವ ಚೊಚ್ಚಲ ಚಿತ್ರದಲ್ಲಿ ಹೊಸ ಪ್ರತಿಭೆ ಸೂರಜ್ ಗೌಡ, ನಟಿ ಅಮೂಲ್ಯ, ಅನಂತ್ ನಾಗ್, ಚಿತ್ರಾ ಶೆಣೈ, ಅಚ್ಯುತ್ ಕುಮಾರ್ ಸೇರಿದಂತೆ ಸಂಗೀತಾ, ಶಾಲಿನಿ ಮುಂತಾದವರು ಕಾಣಿಸಿಕೊಂಡಿರುವ 'ಮದುವೆಯ ಮಮತೆಯ ಕರೆಯೋಲೆ' ಚಿತ್ರವನ್ನು ಹೊಸ ವರ್ಷಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.