Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗಿಗೆ ಸಹಾಯ ಹಸ್ತ ಚಾಚಿದ 'ಬಿಗ್ ಬಾಸ್' ದಿವಾಕರ್
Recommended Video
ಕೊಡಗಿನಲ್ಲಿ ಉಂಟಾದ ಭಾರಿ ಪ್ರವಾಹದಿಂದ ತತ್ತರಗೊಂಡಿರುವ ಜನರಿಗೆ ಕನ್ನಡ ಸಿನಿಮಾ ತಾರೆಯರು ಹಲವು ರೀತಿಯಲ್ಲಿ ನೆರವಾಗಿದ್ದಾರೆ. ಇದೀಗ, ಬಿಗ್ ಬಾಸ್ ಖ್ಯಾತಿಯ ದಿವಾಕರ್ ಅವರು ಮಡಿಕೇರಿಯ ಹಲವು ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ಥರಿಗೆ ಸಹಾಯ ಮಾಡಿದ್ದಾರೆ.
ಕೊಡಗಿನ ಹಲವು ಪ್ರದೇಶಗಳಿಗೆ ನೇರವಾಗಿ ಹೋಗಿ ತಮ್ಮಿಂದ ಆದ ಸಹಾಯವನ್ನ ಮಾಡಿದ್ದಾರೆ ಬಿಗ್ ಬಾಸ್ ದಿವಾಕರ್. ಅಲ್ಲಿನ ಜನರ ಜೊತೆ ಬೆರೆತು, ಅವರ ಕಷ್ಟವಲ್ಲ ಆಲಿಸಿ ಅವರಿಗೆ ಸಾಂತ್ವನ ಹೇಳಿದ್ದಾರೆ.
ಕೊಡಗಿನ ಕಣ್ಣೀರಿಗೆ ಕರವಸ್ತ್ರ ಆದ ಸಂಚಾರಿ ವಿಜಯ್ ಮತ್ತು ತಂಡ
ನಿನ್ನೆ (ಆಗಸ್ಟ್ 23) ಯಶವಂತಪುರ ಎಪಿಎಂಸಿ ಯಾರ್ಡ್ನಲ್ಲಿ ಅಂಗಡಿಮುಂಗಟ್ಟುಗಳ ಮಾಲೀಕರು, ವ್ಯಾಪಾರಿಗಳು, ಕೂಲಿಯಾಳುಗಳನ್ನು ಭೇಟಿಯಾಗಿದ್ದ ದಿವಾಕರ್ ಕೊಡಗು ಸಂತ್ರಸ್ತರಿಗೆ ನೆರವಾಗುವಂತೆ ಕೋರಿದರು.
ಕೊಡಗಿನ ಮಕ್ಕಳಿಗೆ ಹೃದಯಪೂರ್ವಕವಾಗಿ ನೆರವಾದ ಕನ್ನಡ ಸಿನಿತಾರೆಯರು
ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸ್ಥಳೀಯರು ದಿವಾಕರ್ ಮೊರೆಗೆ ಓಗೊಟ್ಟು ತುಂಬು ಹೃದಯದಿಂದ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಸುಮಾರು ₹ 25 ಸಾವಿರಕ್ಕೂ ಹೆಚ್ಚು ಮೌಲ್ಯದ ದವಸ ಧಾನ್ಯಗಳನ್ನ ಸಂಗ್ರಹಿಸಿ ಸಂತ್ರಸ್ತರಿಗೆ ಖುದ್ದು ತಾವೇ ತಲುಪಿಸಿದ್ದಾರೆ.
ವಿಶೇಷ ಅಂದ್ರೆ, ದಿವಾಕರ್ ಅವರು ಮೂಲತಃ ಕೊಡಗಿನವರು. ವಿರಾಜಪೇಟೆ ತಾಲೂಕಿನ ಕಾನೂರು ನಿವಾಸಿ. ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಂಡಿದ್ದಾರೆ.